‘ಆ ವ್ಯಾಪ್ತಿಯಲ್ಲಿ ಐವರಿಗಿಂತ ಹೆಚ್ಚಿನವರು ಗುಂಪು ಸೇರುವುದು, ಮೆರವಣಿಗೆ, ಸಭೆ (ಸರ್ಕಾರಿ ಸಭೆ-ಸಮಾರಂಭ ಹೊರತುಪಡಿಸಿ) ಅಥವಾ ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ. ಶಸ್ತ್ರ, ಬಡಿಗೆ, ಭರ್ಜಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರ ತೆಗೆದುಕೊಂಡು ಹೋಗುವುದು ಮತ್ತು ಹಿಡಿದು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಕಲ್ಲು, ಕ್ಷಾರಪದಾರ್ಥ, ಪಟಾಕಿ ಇಲ್ಲವೆ ಸ್ಫೋಟಕ ವಸ್ತುಗಳು ಮೊದಲಾದವುಗಳನ್ನು ಆ ಸ್ಥಳಕ್ಕೆ ಒಯ್ಯುವುದು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.