‘ಸೌಧದ ಪಶ್ಚಿಮ ದಿಕ್ಕಿನ ಮುಖ್ಯ ಗೇಟ್ ಬಳಿ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ-4 ಇದೆ. ಅಲ್ಲಿ ಭಾರಿ ಮತ್ತು ಲಘು ವಾಹನಗಳು ವೇಗವಾಗಿ ಚಲಿಸುತ್ತಿರುತ್ತವೆ. ಹೆಚ್ಚಿನ ಅಪಘಾತಗಳು ನಡೆಯುವ ಪ್ರದೇಶವೂ ಇದಾಗಿದೆ. ಪ್ರತಿಭಟನೆಗಳು ನಡೆದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಬಹಳ ತೊಂದರೆ ಆಗುತ್ತದೆ. ಸುತ್ತಲಿನ ಹಲಗಾ, ಬಸ್ತವಾಡ, ಕೆ.ಕೆ. ಕೊಪ್ಪ ಹಾಗೂ ಕೆಲವು ಗ್ರಾಮಗಳು ಭಾಷಾ ಮೇಲೆ ಸೂಕ್ಷ್ಮ ಪ್ರದೇಶಗಳಾಗಿವೆ. ಹೀಗಾಗಿ ಸೆ.24ರಿಂದ ಅ.23ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.