ನೆರೆಯ ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಯಿಂದ 300 ಸಕ್ಕರೆ ಚೀಲಗಳನ್ನು ಸಾಗಿಸಲಾಗುತ್ತಿತ್ತು. ವಾಹನ ಪಲ್ಟಿಯಾದ್ದರಿಂದ ಚಾಲಕ ಗಂಭೀರವಾಗಿ ಗಾಯಗೊಂಡಿದ್ದ. ಅವರನ್ನು ಇನ್ನೊಬ್ಬ ಚಾಲಕ ಮತ್ತು ಕ್ಲೀನರ್ ಆಸ್ಪತ್ರೆಗೆ ದಾಖಲಿಸಿ ಬರುವ ವೇಳೆಗಾಗಲೇ ಕಳವು ನಡೆದಿದೆ ಎಂದು ದೂರು ನೀಡಲಾಗಿದೆ. ಸಮೀಪದ ಗ್ರಾಮದವರು ಹಾಗೂ ದಾರಿಯಲ್ಲಿ ಹೋಗುತ್ತಿದ್ದವರು ಸಕ್ಕರೆ ಚೀಲಗಳನ್ನು ಕಳವು ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.