<p><strong>ಬೆಳಗಾವಿ:</strong> ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಎರಡು ದಿನಗಳಿಗೆ ಒಮ್ಮೆ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಭಾಷಚಂದ್ರ ಖುಂಟಿಯಾ ಅಧಿಕಾರಿಗಳಿಗೆ ಸೂಚಿಸಿದರು. <br /> <br /> ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. <br /> <br /> ಕೆಲವು ತಾಲ್ಲೂಕುಗಳಲ್ಲಿ ಆರು ದಿನಗಳಿಗೊಮ್ಮೆ ನದಿಯಿಂದ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ವಿಷಯ ತಿಳಿದು ಸಿಡಿಮಿಡಿಗೊಂಡ ಕಾರ್ಯದರ್ಶಿಗಳು, ಗ್ರಾಮೀಣ ಪ್ರದೇಶಗಳಲ್ಲಿ ಒಂದು ವಾರಕ್ಕೆ ಬೇಕಾದಷ್ಟು ಕುಡಿಯುವ ನೀರು ಸಂಗ್ರಹಿಸಿಟ್ಟುಕೊಳ್ಳುವುದು ಕಷ್ಟ ಹಾಗೂ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಹೀಗಾಗಿ ಕನಿಷ್ಠ 2 ಅಥವಾ 3 ದಿನಗಳಿಗೊಮ್ಮೆಯಾದರೂ ಕುಡಿಯುವ ನೀರನ್ನು ಪೂರೈಸಬೇಕು ಎಂದು ಹೇಳಿದರು. <br /> <br /> ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಶಾಶ್ವತ ಕುಡಿಯುವ ನೀರಿನ ಯೋಜನೆಗಳನ್ನು ಪೂರ್ಣಗೊಳಿಸುವುದಕ್ಕೆ ಒತ್ತು ನೀಡಬೇಕು. ಟ್ಯಾಂಕರ್ ಮೂಲಕ ವಿತರಿಸುತ್ತಿರುವ ನೀರು ಶುದ್ಧವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. <br /> <br /> ಜಿಲ್ಲೆಯ 4 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ. ಇಲ್ಲಿ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಪ್ರಗತಿಯಲ್ಲಿರುವ ಕುಡಿಯುವ ನೀರಿನ ಯೋಜನೆಯನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಈಗ ಅಥಣಿ ತಾಲ್ಲೂಕಿನ 3 ಹಾಗೂ ರಾಯಬಾಗ ತಾಲ್ಲೂಕಿನ 7 ಗ್ರಾಮಗಳಿಗೆ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ವಿತರಿಸಲಾಗುತ್ತಿದ್ದು, ಅವುಗಳನ್ನು ಶುದ್ಧಗೊಳಿಸಿ ವಿತರಿಸಬೇಕು ಎಂದು ಸಲಹೆ ನೀಡಿದರು.<br /> <br /> ಬರಪೀಡಿತ ತಾಲ್ಲೂಕು ಸೇರಿದಂತೆ ಜಿಲ್ಲೆಯಲ್ಲಿ ಪಶುಗಳಿಗೆ ಕಲ್ಪಿಸಲಾಗುತ್ತಿರುವ ಕುಡಿಯುವ ನೀರು, ಮೇವು ಹಾಗೂ ವಿವಿಧ ರೋಗಗಳಿಗೆ ನೀಡುತ್ತಿರುವ ಚಿಕಿತ್ಸಾ ಸೌಲಭ್ಯದ ಕುರಿತು ಮಾಹಿತಿ ಪಡೆದ ಸುಭಾಷಚಂದ್ರ, 64 ಪಶುವೈದ್ಯರ ಕೊರತೆ ಇದೆ.<br /> <br /> ವೈದ್ಯರ ಕೊರತೆ ಇರುವ ಆಸ್ಪತ್ರೆಗಳಿಗೆ ಸದ್ಯ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ವಾರದ 2-3 ದಿನಗಳ ಕಾಲ ನಿಯೋಜಿಸಿ ಪಶುಗಳಿಗೆ ಚಿಕಿತ್ಸೆ ಒದಗಿಸಬೇಕು. ವೈದ್ಯರು ಆಸ್ಪತ್ರೆಗಳಿಗೆ ಆಗಮಿಸುವ ಕುರಿತು ಮಾಹಿತಿಯನ್ನು ಆಯಾ ಗ್ರಾಮಸ್ಥರಿಗೆ ತಿಳಿಸಬೇಕು ಎಂದು ಸೂಚಿಸಿದರು. <br /> <br /> ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ಮಾಡಿ ಅನುದಾನ ಸಮರ್ಪಕವಾಗಿ ಬಳಕೆಯಾಗುವಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಶೇ.10ರಷ್ಟು ಪರಿಶಿಷ್ಟ ಜಾತಿ ಹಾಗೂ ಶೇ. 6ರಷ್ಟು ಪರಿಶಿಷ್ಟ ವರ್ಗದ ಜನಸಂಖ್ಯೆ ಇದ್ದರೂ ಈ ಜನಸಂಖ್ಯೆ ಪ್ರಮಾಣಕ್ಕೆ ಹೋಲಿಸಿದರೆ ಉದ್ಯೋಗ ಖಾತರಿ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡ ಕಾರ್ಮಿಕರ ಸಂಖ್ಯೆ ಕಡಿಮೆಯಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಬಡ ಜನರಿಗೆ ಉದ್ಯೋಗ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕಾರ್ಯದರ್ಶಿಗಳು ಅಧಿಕಾರಿಗಳಿಗೆ ತಿಳಿಸಿದರು. <br /> <br /> ಸಂಪೂರ್ಣ ಸ್ವಚ್ಛತಾ ಆಂದೋಲನದ ಅಡಿಯಲ್ಲಿ 52 ಸಾವಿರ ಶೌಚಾಲಯಗಳ ಪೈಕಿ 32 ಸಾವಿರ ಶೌಚಾಲಯಗಳ ನಿರ್ಮಾಣ ಮಾಡಲಾಗಿದೆ. ಬಾಕಿ ಉಳಿದಿರುವ ಶೌಚಾಲಯಗಳ ನಿರ್ಮಾಣ ಕಾರ್ಯ ತೀವ್ರಗೊಳಿಸಬೇಕು ಸುವರ್ಣ ಗ್ರಾಮ ಯೋಜನೆಯಡಿ ಆಯಾ ಗ್ರಾಮಗಳಿಗೆ ಗುಣಮಟ್ಟದ ಮೂಲಸೌಲಭ್ಯ ಕಲ್ಪಿಸಬೇಕು. <br /> <br /> ರಸ್ತೆ ಬದಿಗಳಲ್ಲಿರುವ ಗ್ರಾಮಗಳ ಸ್ವಚ್ಛತೆಗೆ ಗಮನ ನೀಡಬೇಕು. ವಿವಿಧ ವಸತಿ ಯೋಜನೆಗಳ ಅಡಿ ಸಕಾಲಕ್ಕೆ ವಸತಿ ಸೌಕರ್ಯವನ್ನು ಬಡ ಫಲಾನುಭವಿಗಳಿಗೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಜಿಲ್ಲಾಧಿಕಾರಿ ಡಾ. ಅಜಯ ನಾಗಭೂಷಣ ಮಾತನಾಡಿ, ಕುಡಿಯುವ ನೀರಿನ ಯೋಜನೆಗಳಿಗೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು. ರಸ್ತೆಗಳ ಗುಂಡಿ ಮುಚ್ಚುವ ಕುರಿತು ಮುಂದಿನ 15 ದಿನಗಳಲ್ಲಿ ಸರ್ಕಾರದಿಂದ ಅನುದಾನ ಬಿಡುಗಡೆಯಾಗುವ ಸಂಭವವಿದೆ ಎಂದು ಸಭೆಗೆ ತಿಳಿಸಿದರು. <br /> ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಎರಡು ದಿನಗಳಿಗೆ ಒಮ್ಮೆ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಭಾಷಚಂದ್ರ ಖುಂಟಿಯಾ ಅಧಿಕಾರಿಗಳಿಗೆ ಸೂಚಿಸಿದರು. <br /> <br /> ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. <br /> <br /> ಕೆಲವು ತಾಲ್ಲೂಕುಗಳಲ್ಲಿ ಆರು ದಿನಗಳಿಗೊಮ್ಮೆ ನದಿಯಿಂದ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ವಿಷಯ ತಿಳಿದು ಸಿಡಿಮಿಡಿಗೊಂಡ ಕಾರ್ಯದರ್ಶಿಗಳು, ಗ್ರಾಮೀಣ ಪ್ರದೇಶಗಳಲ್ಲಿ ಒಂದು ವಾರಕ್ಕೆ ಬೇಕಾದಷ್ಟು ಕುಡಿಯುವ ನೀರು ಸಂಗ್ರಹಿಸಿಟ್ಟುಕೊಳ್ಳುವುದು ಕಷ್ಟ ಹಾಗೂ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಹೀಗಾಗಿ ಕನಿಷ್ಠ 2 ಅಥವಾ 3 ದಿನಗಳಿಗೊಮ್ಮೆಯಾದರೂ ಕುಡಿಯುವ ನೀರನ್ನು ಪೂರೈಸಬೇಕು ಎಂದು ಹೇಳಿದರು. <br /> <br /> ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಶಾಶ್ವತ ಕುಡಿಯುವ ನೀರಿನ ಯೋಜನೆಗಳನ್ನು ಪೂರ್ಣಗೊಳಿಸುವುದಕ್ಕೆ ಒತ್ತು ನೀಡಬೇಕು. ಟ್ಯಾಂಕರ್ ಮೂಲಕ ವಿತರಿಸುತ್ತಿರುವ ನೀರು ಶುದ್ಧವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. <br /> <br /> ಜಿಲ್ಲೆಯ 4 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ. ಇಲ್ಲಿ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಪ್ರಗತಿಯಲ್ಲಿರುವ ಕುಡಿಯುವ ನೀರಿನ ಯೋಜನೆಯನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಈಗ ಅಥಣಿ ತಾಲ್ಲೂಕಿನ 3 ಹಾಗೂ ರಾಯಬಾಗ ತಾಲ್ಲೂಕಿನ 7 ಗ್ರಾಮಗಳಿಗೆ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ವಿತರಿಸಲಾಗುತ್ತಿದ್ದು, ಅವುಗಳನ್ನು ಶುದ್ಧಗೊಳಿಸಿ ವಿತರಿಸಬೇಕು ಎಂದು ಸಲಹೆ ನೀಡಿದರು.<br /> <br /> ಬರಪೀಡಿತ ತಾಲ್ಲೂಕು ಸೇರಿದಂತೆ ಜಿಲ್ಲೆಯಲ್ಲಿ ಪಶುಗಳಿಗೆ ಕಲ್ಪಿಸಲಾಗುತ್ತಿರುವ ಕುಡಿಯುವ ನೀರು, ಮೇವು ಹಾಗೂ ವಿವಿಧ ರೋಗಗಳಿಗೆ ನೀಡುತ್ತಿರುವ ಚಿಕಿತ್ಸಾ ಸೌಲಭ್ಯದ ಕುರಿತು ಮಾಹಿತಿ ಪಡೆದ ಸುಭಾಷಚಂದ್ರ, 64 ಪಶುವೈದ್ಯರ ಕೊರತೆ ಇದೆ.<br /> <br /> ವೈದ್ಯರ ಕೊರತೆ ಇರುವ ಆಸ್ಪತ್ರೆಗಳಿಗೆ ಸದ್ಯ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ವಾರದ 2-3 ದಿನಗಳ ಕಾಲ ನಿಯೋಜಿಸಿ ಪಶುಗಳಿಗೆ ಚಿಕಿತ್ಸೆ ಒದಗಿಸಬೇಕು. ವೈದ್ಯರು ಆಸ್ಪತ್ರೆಗಳಿಗೆ ಆಗಮಿಸುವ ಕುರಿತು ಮಾಹಿತಿಯನ್ನು ಆಯಾ ಗ್ರಾಮಸ್ಥರಿಗೆ ತಿಳಿಸಬೇಕು ಎಂದು ಸೂಚಿಸಿದರು. <br /> <br /> ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ಮಾಡಿ ಅನುದಾನ ಸಮರ್ಪಕವಾಗಿ ಬಳಕೆಯಾಗುವಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಶೇ.10ರಷ್ಟು ಪರಿಶಿಷ್ಟ ಜಾತಿ ಹಾಗೂ ಶೇ. 6ರಷ್ಟು ಪರಿಶಿಷ್ಟ ವರ್ಗದ ಜನಸಂಖ್ಯೆ ಇದ್ದರೂ ಈ ಜನಸಂಖ್ಯೆ ಪ್ರಮಾಣಕ್ಕೆ ಹೋಲಿಸಿದರೆ ಉದ್ಯೋಗ ಖಾತರಿ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡ ಕಾರ್ಮಿಕರ ಸಂಖ್ಯೆ ಕಡಿಮೆಯಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಬಡ ಜನರಿಗೆ ಉದ್ಯೋಗ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕಾರ್ಯದರ್ಶಿಗಳು ಅಧಿಕಾರಿಗಳಿಗೆ ತಿಳಿಸಿದರು. <br /> <br /> ಸಂಪೂರ್ಣ ಸ್ವಚ್ಛತಾ ಆಂದೋಲನದ ಅಡಿಯಲ್ಲಿ 52 ಸಾವಿರ ಶೌಚಾಲಯಗಳ ಪೈಕಿ 32 ಸಾವಿರ ಶೌಚಾಲಯಗಳ ನಿರ್ಮಾಣ ಮಾಡಲಾಗಿದೆ. ಬಾಕಿ ಉಳಿದಿರುವ ಶೌಚಾಲಯಗಳ ನಿರ್ಮಾಣ ಕಾರ್ಯ ತೀವ್ರಗೊಳಿಸಬೇಕು ಸುವರ್ಣ ಗ್ರಾಮ ಯೋಜನೆಯಡಿ ಆಯಾ ಗ್ರಾಮಗಳಿಗೆ ಗುಣಮಟ್ಟದ ಮೂಲಸೌಲಭ್ಯ ಕಲ್ಪಿಸಬೇಕು. <br /> <br /> ರಸ್ತೆ ಬದಿಗಳಲ್ಲಿರುವ ಗ್ರಾಮಗಳ ಸ್ವಚ್ಛತೆಗೆ ಗಮನ ನೀಡಬೇಕು. ವಿವಿಧ ವಸತಿ ಯೋಜನೆಗಳ ಅಡಿ ಸಕಾಲಕ್ಕೆ ವಸತಿ ಸೌಕರ್ಯವನ್ನು ಬಡ ಫಲಾನುಭವಿಗಳಿಗೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಜಿಲ್ಲಾಧಿಕಾರಿ ಡಾ. ಅಜಯ ನಾಗಭೂಷಣ ಮಾತನಾಡಿ, ಕುಡಿಯುವ ನೀರಿನ ಯೋಜನೆಗಳಿಗೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು. ರಸ್ತೆಗಳ ಗುಂಡಿ ಮುಚ್ಚುವ ಕುರಿತು ಮುಂದಿನ 15 ದಿನಗಳಲ್ಲಿ ಸರ್ಕಾರದಿಂದ ಅನುದಾನ ಬಿಡುಗಡೆಯಾಗುವ ಸಂಭವವಿದೆ ಎಂದು ಸಭೆಗೆ ತಿಳಿಸಿದರು. <br /> ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>