ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕೃಷಿ ಹೊಂಡಗಳನ್ನು ನಿರ್ಮಿಸಿಕೊಳ್ಳಲು ರೈತರಿಗೆ ಸಹಾಯಧನ ನೀಡುವ ಕೃಷಿ ಭಾಗ್ಯ ಯೋಜನೆ ಜಾರಿಗೊಳಿಸಿತು. 2014–15ನೇ ಸಾಲಿನಲ್ಲಿ ಅಥಣಿ, ಗೋಕಾಕ, ರಾಯಬಾಗ, ರಾಮದುರ್ಗ, ಸವದತ್ತಿ, 2015–16ರಿಂದ ಬೈಲಹೊಂಗಲ, ಚಿಕ್ಕೋಡಿ ಹಾಗೂ ಹುಕ್ಕೇರಿ, 2017–18ರಿಂದ ಬೆಳಗಾವಿ ಹಾಗೂ ಖಾನಾಪುರ ತಾಲ್ಲೂಕುಗಳಿಗೆ ಯೋಜನೆ ವಿಸ್ತರಿಸಲಾಯಿತು. ಇದರಿಂದ ಜಿಲ್ಲೆಯ ಸಾವಿರಾರು ರೈತರು ಪ್ರಯೋಜನ ಪಡೆದಿದ್ದಾರೆ. ರೈತರಿಂದ ಉತ್ತಮ ಪ್ರತಿಕ್ರಿಯೆ ದೊರೆತ ಹಿನ್ನೆಲೆಯಲ್ಲಿ ಯೋಜನೆಯನ್ನು 2017–18ನೇ ಸಾಲಿನಿಂದ ಎಲ್ಲ ತಾಲ್ಲೂಕುಗಳಿಗೂ ವಿಸ್ತರಿಸಲಾಗಿದೆ.