ಎಲ್ಲ ವಿದ್ಯಾರ್ಥಿಗಳೂ ಎಂದಿನಂತೆ ಸೋಮವಾರ ಬೆಳಿಗ್ಗೆ ಕೂಡ ಉಪಾಹಾರ ಸೇವಿಸಿದ್ದರು. ಚಪಾತಿ, ಅನ್ನ ಸಾರು ನೀಡಲಾಗಿತ್ತು. ಸಾರಿನಲ್ಲಿ ಹಲ್ಲಿ ಬಿದ್ದಿದ್ದನ್ನು ಕೆಲವು ಮಕ್ಕಳು ಗಮನಿಸಿದರು. ಕೆಲ ಸಮಯದ ನಂತರ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತು. ಇದನ್ನರಿತ ಶಿಕ್ಷಕರು ಎಲ್ಲರನ್ನೂ ಇಂಚಲದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಕೆಲ ಮಕ್ಕಳು ಚೇತರಿಸಿಕೊಂಡಿದ್ದು, ಇನ್ನೂ ಕೆಲವರು ಆಸ್ಪತ್ರೆಯಲ್ಲಿದ್ದಾರೆ.
ಯಾರಿಗೂ ಅಪಾಯವಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಸಿವೆ.