ಬೆಳಗಾವಿ: ನಗರದ ಹೊರವಲಯದ ಚೆಕ್ಪೋಸ್ಟ್ನಲ್ಲಿ ಶುಕ್ರವಾರ ತಡರಾತ್ರಿ, ಗುತ್ತಿಗೆದಾರರೊಬ್ಬರು ಕಾರಿನಲ್ಲಿ ಸಾಗಿಸುತ್ತಿದ್ದ ₹ 26 ಲಕ್ಷ ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹಾರಾಷ್ಟ್ರದ ಕೊಲ್ಹಾಪುರದ ಗುತ್ತಿಗೆದಾರ ಕಾರಿನಲ್ಲಿ ಗೋವಾ ಕಡೆಗೆ ಹೊರಟಿದ್ದರು. ತಡರಾತ್ರಿ ಬೆಳಗಾವಿ ನಗರ ಪ್ರವೇಶ ಮಾಡಿದಾಗ, ಪೊಲೀಸರು ತಪಾಸಣೆ ನಡೆಸಿದರು. ಡಿಕ್ಕಿಯಲ್ಲಿ ₹ 26 ಲಕ್ಷ ನಗದು ಇರುವುದು ಪತ್ತೆಯಾಯಿತು. ಹಣಕ್ಕೆ ಸೂಕ್ತ ದಾಖಲೆ ಇಲ್ಲದ ಕಾರಣ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಸುಪರ್ದಿಗೆ ವಹಿಸಲಾಗಿದೆ.
‘ಪತ್ನಿಯೊಂದಿಗೆ ಕಲಹ ಉಂಟಾಗಿದೆ. ನೆಮ್ಮದಿಗಾಗಿ ನಾನು ಗೋವಾಗೆ ಹೊರಟಿದ್ದೇನೆ. ನಾನು ಎಲ್ಲಿಯೇ ಆನ್ಲೈನ್ ಪೇಮೆಂಟ್ ಮಾಡಿದರೂ ನನ್ನ ಪತ್ನಿ ಪತ್ತೆ ಹಚ್ಚಿ ಬರುತ್ತಾಳೆ. ಹಾಗಾಗಿ, ಹಣ ವಿತ್ಡ್ರಾ ಮಾಡಿಕೊಂಡು ಹೊರಟಿದ್ದೇನೆ. ಗೂಗಲ್ ಮ್ಯಾಪ್ ಅನುರಿಸಿ ಗೋವಾಗೆ ಹೊರಟಿದ್ದೆ. ಚುನಾವಣೆಯ ಅರಿವಿದಲ್ಲದೇ ಬೆಳಗಾವಿ ನಗರದ ಪ್ರವೇಶಿಸಿದ್ದೇನೆ ಎಂಬ ಗುತ್ತಿಗೆದಾರ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.