'ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಮೀಸಲಾತಿ ವಿಚಾರವಾಗಿ ಮಾತು ನೀಡಿ ತಪ್ಪಿದ್ದಾರೆ. ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಮಾತು ತಪ್ಪಿದ ಹಿನ್ನೆಲೆಯಲ್ಲಿ ಶಿಗ್ಗಾವಿಯ ಅವರ ನಿವಾಸದ ಎದುರು ಧರಣಿ ನಡೆಸಬೇಕಾಯಿತು. ಈಗಾಗಲೇ ಸಾಕಷ್ಟು ಉಪವಾಸ ಸತ್ಯಾಗ್ರಹ, ಪಾದಯಾತ್ರೆ, ಧರಣಿಗಳನ್ನೂ ಮಾಡಿದ್ದೇವೆ. ಅಲ್ಲದೇ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸದನದಲ್ಲಿಯೂ ಧ್ವನಿ ಎತ್ತಿದ್ದಾರೆ. ಆದರೂ ಸರ್ಕಾರ ನಮ್ಮ ಸಮಾಜದ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ದೃಢ ನಿರ್ಧಾರ ಕೈಗೊಳ್ಳುತ್ತಿಲ್ಲ' ಎಂದು ಬೇಸರ ವ್ಯಕ್ತಪಡಿಸಿದರು.