<p><strong>ಬೆಳಗಾವಿ: </strong>ತಾಲ್ಲೂಕಿನ ಹೊನಗಾದ ಪಿ.ಬಿ. ರಸ್ತೆಯ ಧಾಬಾವೊಂದರ ಪಾನ್ಶಾಪ್ ಮತ್ತು ಚನ್ನಮ್ಮ ನಗರದಲ್ಲಿ ದಾಳಿ ನಡೆಸಿದ ಸಿಇಎನ್ ಅಪರಾಧ ಠಾಣೆ ಪೊಲೀಸರು, ಮಾದಕ ಪದಾರ್ಥ ಅಫೀಮನ್ನು ಅಕ್ರಮವಾಗಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ.</p>.<p>‘ಪಾನ್ ಶಾಪ್ ಇಟ್ಟುಕೊಂಡಿದ್ದ ತಾಲ್ಲೂಕಿನ ಜೋಗಾನಟ್ಟಿ ಗ್ರಾಮದ ಬರಖತ್ಖಾನ್ ವಿಲ್ಲಾಖಾನ್ (30), ಚನ್ನಮ್ಮ ನಗರದ ಸರವನ್ ಅಲಿಯಾಸ್ ಸಾವರಾರಾಮ (21) ಹಾಗೂ ಹುಬ್ಬಳ್ಳಿಯ ಮೊರಾರ್ಜಿ ನಗರದ ಗೋಕುಲ ರಸ್ತೆಯ ಕಮಲೇಶ ಬೇನಿವಾ (25) ಬಂಧಿತರು. ಅವರಿಂದ 1 ಕೆ.ಜಿ. 15 ಗ್ರಾಂ. ತೂಕದ ಅಫೀಮು ವಶಪಡಿಸಿಕೊಳ್ಳಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅದರ ಬೆಲೆ ಸುಮಾರು ₹ 20 ಲಕ್ಷ ಆಗುತ್ತದೆ’ ಎಂದು ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಪತ್ರಕರ್ತರಿಗೆ ತಿಳಿಸಿದರು.</p>.<p>‘ಸಿಇಎನ್ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ. ಸಿಇಎನ್ ಠಾಣೆ ಇನ್ಸ್ಪೆಕ್ಟರ್ ಬಿ.ಆರ್. ಗಡ್ಡೇಕರ, ಅಧಿಕಾರಿಗಳು ಹಾಗೂ ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಿದ್ದಾರೆ. ಈ ಕಾರ್ಯವನ್ನು ನಗರ ಪೊಲೀಸ್ ಆಯುಕ್ತರು ಶ್ಲಾಘಿಸಿ ಬಹುಮಾನ ಘೋಷಿಸಿದ್ದಾರೆ’ ಎಂದು ಡಿಸಿಪಿ ವಿಕ್ರಂ ಅಮಟೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ತಾಲ್ಲೂಕಿನ ಹೊನಗಾದ ಪಿ.ಬಿ. ರಸ್ತೆಯ ಧಾಬಾವೊಂದರ ಪಾನ್ಶಾಪ್ ಮತ್ತು ಚನ್ನಮ್ಮ ನಗರದಲ್ಲಿ ದಾಳಿ ನಡೆಸಿದ ಸಿಇಎನ್ ಅಪರಾಧ ಠಾಣೆ ಪೊಲೀಸರು, ಮಾದಕ ಪದಾರ್ಥ ಅಫೀಮನ್ನು ಅಕ್ರಮವಾಗಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ.</p>.<p>‘ಪಾನ್ ಶಾಪ್ ಇಟ್ಟುಕೊಂಡಿದ್ದ ತಾಲ್ಲೂಕಿನ ಜೋಗಾನಟ್ಟಿ ಗ್ರಾಮದ ಬರಖತ್ಖಾನ್ ವಿಲ್ಲಾಖಾನ್ (30), ಚನ್ನಮ್ಮ ನಗರದ ಸರವನ್ ಅಲಿಯಾಸ್ ಸಾವರಾರಾಮ (21) ಹಾಗೂ ಹುಬ್ಬಳ್ಳಿಯ ಮೊರಾರ್ಜಿ ನಗರದ ಗೋಕುಲ ರಸ್ತೆಯ ಕಮಲೇಶ ಬೇನಿವಾ (25) ಬಂಧಿತರು. ಅವರಿಂದ 1 ಕೆ.ಜಿ. 15 ಗ್ರಾಂ. ತೂಕದ ಅಫೀಮು ವಶಪಡಿಸಿಕೊಳ್ಳಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅದರ ಬೆಲೆ ಸುಮಾರು ₹ 20 ಲಕ್ಷ ಆಗುತ್ತದೆ’ ಎಂದು ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಪತ್ರಕರ್ತರಿಗೆ ತಿಳಿಸಿದರು.</p>.<p>‘ಸಿಇಎನ್ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ. ಸಿಇಎನ್ ಠಾಣೆ ಇನ್ಸ್ಪೆಕ್ಟರ್ ಬಿ.ಆರ್. ಗಡ್ಡೇಕರ, ಅಧಿಕಾರಿಗಳು ಹಾಗೂ ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಿದ್ದಾರೆ. ಈ ಕಾರ್ಯವನ್ನು ನಗರ ಪೊಲೀಸ್ ಆಯುಕ್ತರು ಶ್ಲಾಘಿಸಿ ಬಹುಮಾನ ಘೋಷಿಸಿದ್ದಾರೆ’ ಎಂದು ಡಿಸಿಪಿ ವಿಕ್ರಂ ಅಮಟೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>