ಬೆಂಗಳೂರು: ಪ್ರತಿಪಕ್ಷಗಳ ಗದ್ದಲಕ್ಕೆ ಬಜೆಟ್ ಅಧಿವೇಶನ ಕಲಾಪ ಬಲಿಯಾಗಿದ್ದನ್ನು ಖಂಡಿಸಿ ಬಿಜೆಪಿ ಮುಖಂಡರು ಇಲ್ಲಿನ ಆನಂದರಾವ್ ವೃತ್ತದಲ್ಲಿ ಗುರುವಾರ ಉಪವಾಸ ಸತ್ಯಾಗ್ರಹ ನಡೆಸಿದರು.
ಕೇಂದ್ರ ಸಚಿವರಾದ ಅನಂತಕುಮಾರ್, ಪ್ರಕಾಶ್ ಜಾವಡೇಕರ್, ರಾಜ್ಯದ ಬಿಜೆಪಿ ಉಸ್ತುವಾರಿ ಮುರಳೀಧರರಾವ್ ಸೇರಿ ಹಲವು ಮುಖಂಡರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.
‘ಕಲಾಪದಿಂದ ಪಲಾಯನ ಮಾಡಿದ್ದಾರೆ. ನೃತ್ಯ ಗೊತ್ತಿಲ್ಲದವರು ವೇದಿಕೆ ಸರಿಯಿಲ್ಲ ಎಂದು ದೂರುತ್ತಿದ್ದಾರೆ. ಇಂಥ ಲಜ್ಜೆಗೆಟ್ಟ ಕೆಲಸವನ್ನು ಕಾಂಗ್ರೆಸ್ ಅಲ್ಲದೆ, ಇನ್ಯಾವ ಪಕ್ಷವೂ ಮಾಡಲು ಸಾಧ್ಯವಿಲ್ಲ’ ಎಂದು ಡಿ.ವಿ.ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದರು.
* ಬಿಜೆಪಿ–ಕಾಂಗ್ರೆಸ್ ನಡುವೆ ಸೈದ್ಧಾಂತಿಕ ಯುದ್ಧ ಶುರುವಾಗಿದೆ. ಅವರ ವಂಶಪಾರಂಪರ್ಯ ಆಡಳಿತದ ವಿರುದ್ಧ ಸಮರ ಸಾರಿದ್ದೇವೆ