ಝೂ ತಲುಪಿದ ಮೂರು ಸಿಂಹಗಳು
ಬೆಳಗಾವಿ: ತಾಲ್ಲೂಕಿನ ಭೂತರಾಮನಹಟ್ಟಿಯಲ್ಲಿರುವ ಮೃಗಾಲಯಕ್ಕೆ ಮೂರು ಸಿಂಹಗಳನ್ನು ತರಿಸಲಾಗಿದೆ.
ಬನ್ನೇರಘಟ್ಟ ಜೈವಿಕ ಉದ್ಯಾನದಿಂದ ಬುಧವಾರ ರಾತ್ರಿ ಅವುಗಳನ್ನು ಇಲ್ಲಿಗೆ ಸುರಕ್ಷಿತವಾಗಿ ಸಾಗಿಸಲಾಗಿದೆ. ‘ನಕುಲ’, ‘ಕೃಷ್ಣ’ ಹಾಗೂ ‘ನಿರುಪಮಾ’ ಹೆಸರಿನ ಈ ಸಿಂಹಗಳು 2010ರ ಫೆ.12ರಂದು ‘ಪ್ರೇಕ್ಷಾ’–‘ಗಣೇಶ’ ಜೋಡಿಗೆ ಜನಿಸಿದವಾಗಿವೆ ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರ ಟ್ವೀಟ್ ಮಾಡಿದೆ.
‘ಮೂರು ಸಿಂಹಗಳನ್ನು ಶೀಘ್ರವೇ ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಳಿಸಲಾಗುವುದು. ಇದು ಹೆಚ್ಚಿನ ಪ್ರವಾಸಿಗರನ್ನು ಮೃಗಾಲಯಕ್ಕೆ ಸೆಳೆಯುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ’ ಎಂದು ತಿಳಿಸಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.