<p><strong>ಬೆಳಗಾವಿ:</strong> ‘ಕಟ್ಟಡ ಕಾರ್ಮಿಕರಿಗೆ ತಲಾ ₹3,000 ನೀಡಲಾಗುವುದು. ಇದಕ್ಕೆ ₹ 499 ಕೋಟಿ ಖರ್ಚಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿರುವುದನ್ನು ಸ್ವಾಗತಿಸುತ್ತೇವೆ. ಆದರೆ, ಈ ಮೊತ್ತ ಸಾಲುವುದಿಲ್ಲ’ ಎಂದು ಇಲ್ಲಿನ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಎನ್.ಆರ್. ಲಾತೂರ ಹೇಳಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ರಾಜ್ಯದಲ್ಲಿ 21 ಲಕ್ಷ ನೋಂದಾಯಿತ ಕಾರ್ಮಿಕರಿದ್ದಾರೆ. ₹ 499 ಕೋಟಿಯಲ್ಲಿ ಎಲ್ಲರಿಗೂ ₹ 3 ಸಾವಿರ ಕೊಡಲಾಗುವುದಿಲ್ಲ. ಇದರಲ್ಲಿ ಸ್ವಲ್ಪ ಮಂದಿಗೆ ಸಿಗುತ್ತದೆ. ಉಳಿದವರಿಗೆ ಸಿಗುವುದಿಲ್ಲ. ಇದು ಗೊಂದಲಕ್ಕೆ ಕಾರಣವಾಗುತ್ತದೆ. ಇದಕ್ಕೆ ಅವಕಾಶ ಕೊಡಬಾರದು. ನೋಂದಾಯಿತರಾದ ಎಲ್ಲರಿಗೂ ಪರಿಹಾರ ಕಲ್ಪಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ಕಳೆದ ಬಾರಿ ₹5 ಸಾವಿರ ಪರಿಹಾರ ನೀಡಲಾಗಿತ್ತು. ಆಹಾರದ ಪಾಕೆಟ್ಗಳನ್ನು ಕೂಡ ಕೊಡಲಾಗಿತ್ತು. ಈ ಬಾರಿ ಕಿಟ್ ಕೊಟ್ಟಿಲ್ಲ. ಹೀಗಾಗಿ, ತಲಾ ₹ 10ಸಾವಿರ ಪರಿಹಾರ ನೀಡಬೇಕು. ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ₹ 6ಸಾವಿರ ಕೋಟಿ ಲಭ್ಯವಿದೆ. ಇದು ಕಾರ್ಮಿಕರಿಗಾಗಿಯೇ ಇರುವ ಹಣ. ಅದನ್ನು ಬಳಸಿಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಕಟ್ಟಡ ಕಾರ್ಮಿಕರಿಗೆ ತಲಾ ₹3,000 ನೀಡಲಾಗುವುದು. ಇದಕ್ಕೆ ₹ 499 ಕೋಟಿ ಖರ್ಚಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿರುವುದನ್ನು ಸ್ವಾಗತಿಸುತ್ತೇವೆ. ಆದರೆ, ಈ ಮೊತ್ತ ಸಾಲುವುದಿಲ್ಲ’ ಎಂದು ಇಲ್ಲಿನ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಎನ್.ಆರ್. ಲಾತೂರ ಹೇಳಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ರಾಜ್ಯದಲ್ಲಿ 21 ಲಕ್ಷ ನೋಂದಾಯಿತ ಕಾರ್ಮಿಕರಿದ್ದಾರೆ. ₹ 499 ಕೋಟಿಯಲ್ಲಿ ಎಲ್ಲರಿಗೂ ₹ 3 ಸಾವಿರ ಕೊಡಲಾಗುವುದಿಲ್ಲ. ಇದರಲ್ಲಿ ಸ್ವಲ್ಪ ಮಂದಿಗೆ ಸಿಗುತ್ತದೆ. ಉಳಿದವರಿಗೆ ಸಿಗುವುದಿಲ್ಲ. ಇದು ಗೊಂದಲಕ್ಕೆ ಕಾರಣವಾಗುತ್ತದೆ. ಇದಕ್ಕೆ ಅವಕಾಶ ಕೊಡಬಾರದು. ನೋಂದಾಯಿತರಾದ ಎಲ್ಲರಿಗೂ ಪರಿಹಾರ ಕಲ್ಪಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ಕಳೆದ ಬಾರಿ ₹5 ಸಾವಿರ ಪರಿಹಾರ ನೀಡಲಾಗಿತ್ತು. ಆಹಾರದ ಪಾಕೆಟ್ಗಳನ್ನು ಕೂಡ ಕೊಡಲಾಗಿತ್ತು. ಈ ಬಾರಿ ಕಿಟ್ ಕೊಟ್ಟಿಲ್ಲ. ಹೀಗಾಗಿ, ತಲಾ ₹ 10ಸಾವಿರ ಪರಿಹಾರ ನೀಡಬೇಕು. ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ₹ 6ಸಾವಿರ ಕೋಟಿ ಲಭ್ಯವಿದೆ. ಇದು ಕಾರ್ಮಿಕರಿಗಾಗಿಯೇ ಇರುವ ಹಣ. ಅದನ್ನು ಬಳಸಿಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>