ಬೆಳಗಾವಿ: ‘ಕಟ್ಟಡ ಕಾರ್ಮಿಕರಿಗೆ ತಲಾ ₹3,000 ನೀಡಲಾಗುವುದು. ಇದಕ್ಕೆ ₹ 499 ಕೋಟಿ ಖರ್ಚಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿರುವುದನ್ನು ಸ್ವಾಗತಿಸುತ್ತೇವೆ. ಆದರೆ, ಈ ಮೊತ್ತ ಸಾಲುವುದಿಲ್ಲ’ ಎಂದು ಇಲ್ಲಿನ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಎನ್.ಆರ್. ಲಾತೂರ ಹೇಳಿದ್ದಾರೆ.