<p><strong>ಬೆಳಗಾವಿ: </strong>ಆರನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆಗೆ ಆಗ್ರಹಿಸಿ ಎನ್ಡಬ್ಲ್ಯುಕೆಆರ್ಟಿಸಿ ನೌಕರರು ನಡೆಸುತ್ತಿರುವ ಮುಷ್ಕರ 5ನೇ ದಿನವಾದ ಭಾನುವಾರವೂ ಮುಂದುವರಿಯಿತು.</p>.<p>ಕ್ರಮೇಣ ನೌಕರರು ಕೆಲಸಕ್ಕೆ ಹಾಜರಾಗುತ್ತಿದ್ದಾರೆ. 39 ಮಂದಿ ಚಾಲಕರು ಹಾಗೂ ನಿರ್ವಾಹಕರು ಬಂದು ಕಾರ್ಯನಿರ್ವಹಿಸಿದರು. ಇದರಿಂದ ಕೆಲವು ಮಾರ್ಗಗಳಲ್ಲಿ ಬಸ್ಗಳು ಕಾರ್ಯಾಚರಣೆ ನಡೆಸಿವೆ.</p>.<p>ಈ ನಡುವೆ, ಕೆಲಸಕ್ಕೆ ಹಾಜರಾಗದ ನೌಕರರ ವಿರುದ್ಧ ಸಂಸ್ಥೆಯು ಶಿಸ್ತುಕ್ರಮಕ್ಕೆ ಮುಂದಾಗಿದೆ. ವರ್ಗಾವಣೆ ಅಸ್ತ್ರ ಪ್ರಯೋಗಿಸಿದೆ. ‘23 ಮಂದಿಯನ್ನು ವರ್ಗಾಯಿಸಲಾಗಿದೆ. ಒಬ್ಬ ತರಬೇತಿ ಚಾಲಕನನ್ನು ಕೆಲಸದಿಂದ ತೆಗೆದು ಹಾಕಲಾಗಿದೆ’ ಎಂದು ಎನ್ಡಬ್ಲ್ಯುಕೆಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ ತಿಳಿಸಿದರು.</p>.<p>‘ಯುಗಾದಿ ಹಬ್ಬ ಬರುತ್ತಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯೂ ಇದೆ. ಹೀಗಾಗಿ, ನೌಕರರು ಕೆಲಸಕ್ಕೆ ಹಾಜರಾಗಬೇಕು’ ಎಂದು ಕೋರಿದರು.</p>.<p>ಕೆಲವು ಖಾಸಗಿ ವಾಹನಗಳು ಕೇಂದ್ರ ಬಸ್ ನಿಲ್ದಾಣದಿಂದ ಕಾರ್ಯಾಚರಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಆರನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆಗೆ ಆಗ್ರಹಿಸಿ ಎನ್ಡಬ್ಲ್ಯುಕೆಆರ್ಟಿಸಿ ನೌಕರರು ನಡೆಸುತ್ತಿರುವ ಮುಷ್ಕರ 5ನೇ ದಿನವಾದ ಭಾನುವಾರವೂ ಮುಂದುವರಿಯಿತು.</p>.<p>ಕ್ರಮೇಣ ನೌಕರರು ಕೆಲಸಕ್ಕೆ ಹಾಜರಾಗುತ್ತಿದ್ದಾರೆ. 39 ಮಂದಿ ಚಾಲಕರು ಹಾಗೂ ನಿರ್ವಾಹಕರು ಬಂದು ಕಾರ್ಯನಿರ್ವಹಿಸಿದರು. ಇದರಿಂದ ಕೆಲವು ಮಾರ್ಗಗಳಲ್ಲಿ ಬಸ್ಗಳು ಕಾರ್ಯಾಚರಣೆ ನಡೆಸಿವೆ.</p>.<p>ಈ ನಡುವೆ, ಕೆಲಸಕ್ಕೆ ಹಾಜರಾಗದ ನೌಕರರ ವಿರುದ್ಧ ಸಂಸ್ಥೆಯು ಶಿಸ್ತುಕ್ರಮಕ್ಕೆ ಮುಂದಾಗಿದೆ. ವರ್ಗಾವಣೆ ಅಸ್ತ್ರ ಪ್ರಯೋಗಿಸಿದೆ. ‘23 ಮಂದಿಯನ್ನು ವರ್ಗಾಯಿಸಲಾಗಿದೆ. ಒಬ್ಬ ತರಬೇತಿ ಚಾಲಕನನ್ನು ಕೆಲಸದಿಂದ ತೆಗೆದು ಹಾಕಲಾಗಿದೆ’ ಎಂದು ಎನ್ಡಬ್ಲ್ಯುಕೆಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ ತಿಳಿಸಿದರು.</p>.<p>‘ಯುಗಾದಿ ಹಬ್ಬ ಬರುತ್ತಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯೂ ಇದೆ. ಹೀಗಾಗಿ, ನೌಕರರು ಕೆಲಸಕ್ಕೆ ಹಾಜರಾಗಬೇಕು’ ಎಂದು ಕೋರಿದರು.</p>.<p>ಕೆಲವು ಖಾಸಗಿ ವಾಹನಗಳು ಕೇಂದ್ರ ಬಸ್ ನಿಲ್ದಾಣದಿಂದ ಕಾರ್ಯಾಚರಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>