ವಿದ್ಯಾರ್ಥಿಗಳು ಮಧ್ಯಾಹ್ನ ಕೆರೆ ಬಳಿ ಬಂದಿದ್ದರು. ಬಟ್ಟೆಗಳು ಹಾಗೂ ಮೊಬೈಲ್ಗಳನ್ನು ಬೈಕ್ ಮೇಲಿಟ್ಟು, ಈಜಲು ಕೆರೆಯಲ್ಲಿ ಇಳಿದಾಗ ದುರ್ಘಟನೆ ಸಂಭವಿಸಿದೆ. ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ದೂರವಾಣಿ ಕರೆ ಮಾಡಿ, ವಿಷಯ ಮುಟ್ಟಿಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಗ್ನಿ ಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಇಳಿದು, ಶವಗಳನ್ನು ಹೊರತೆಗೆದಿದ್ದಾರೆ. ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.