<p><strong>ಮೂಡಲಗಿ: </strong>ತಾಲ್ಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಮೂರು ದಿನಗಳ ಅಂತರದಲ್ಲಿ ಐವರು ಸಾವಿಗೀಡಾಗಿರುವುದು ಗ್ರಾಮಸ್ಥರ ಆತಂಕ್ಕೆ ಕಾರಣವಾಗಿದೆ.</p>.<p>ಐವರಲ್ಲಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಬನಪ್ಪ ರೆಬೋಜಿ ಮಳ್ಳಿವಡೆಯರ ಭಾನುವಾರ ಮತ್ತು ಪಿಡಿಒ ಬಾಳಪ್ಪ ಭೀಮರಾಯಪ್ಪ ಗಡದನ್ನವರ ಸಾವಿಗೀಡಾಗಿದ್ದಾರೆ. ಇದರಿಂದಾಗಿ ಅಲ್ಲಿ ಸ್ಮಶಾನ ಮೌನ ಮನೆ ಮಾಡಿದೆ.</p>.<p>‘ಗ್ರಾಮದಲ್ಲಿ ಕೆಲವು ದಿನಗಳ ಹಿಂದೆ 180 ಮಂದಿಗೆ ಕೋವಿಡ್ ಲಸಿಕೆ ಹಾಕಲಾಗಿತ್ತು. ಇವರಲ್ಲಿ ಹಲವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ’ ಎಂದು ಗ್ರಾಮಸ್ಥರು ತಿಳಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಮಸಗುಪ್ಪಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಸಿ.ಆರ್. ಕುಂಬಾರ, ‘ಲಸಿಕೆಯಿಂದ ಯಾವುದೇ ಸಾವು ಸಂಭವಿಸಿಲ್ಲ. ಉಹಾಪೋಹಗಳನ್ನು ಹರಿಬಿಡಲಾಗುತ್ತಿದೆ. ಜನರಲ್ಲಿ ಬಂದಿರುವ ತಪ್ಪು ಕಲ್ಪನೆ ನಿವಾರಿಸಲು ಏ.21ರಂದು (ಬುಧವಾರ) ಆ ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೋವಿಡ್ ತಪಾಸಣೆ ಶಿಬಿರವನ್ನು ನಡೆಸಲಾಗುವುದು. ಜನರಲ್ಲಿರುವ ಆತಂಕ ದೂರ ಮಾಡಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಲಗಿ: </strong>ತಾಲ್ಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಮೂರು ದಿನಗಳ ಅಂತರದಲ್ಲಿ ಐವರು ಸಾವಿಗೀಡಾಗಿರುವುದು ಗ್ರಾಮಸ್ಥರ ಆತಂಕ್ಕೆ ಕಾರಣವಾಗಿದೆ.</p>.<p>ಐವರಲ್ಲಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಬನಪ್ಪ ರೆಬೋಜಿ ಮಳ್ಳಿವಡೆಯರ ಭಾನುವಾರ ಮತ್ತು ಪಿಡಿಒ ಬಾಳಪ್ಪ ಭೀಮರಾಯಪ್ಪ ಗಡದನ್ನವರ ಸಾವಿಗೀಡಾಗಿದ್ದಾರೆ. ಇದರಿಂದಾಗಿ ಅಲ್ಲಿ ಸ್ಮಶಾನ ಮೌನ ಮನೆ ಮಾಡಿದೆ.</p>.<p>‘ಗ್ರಾಮದಲ್ಲಿ ಕೆಲವು ದಿನಗಳ ಹಿಂದೆ 180 ಮಂದಿಗೆ ಕೋವಿಡ್ ಲಸಿಕೆ ಹಾಕಲಾಗಿತ್ತು. ಇವರಲ್ಲಿ ಹಲವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ’ ಎಂದು ಗ್ರಾಮಸ್ಥರು ತಿಳಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಮಸಗುಪ್ಪಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಸಿ.ಆರ್. ಕುಂಬಾರ, ‘ಲಸಿಕೆಯಿಂದ ಯಾವುದೇ ಸಾವು ಸಂಭವಿಸಿಲ್ಲ. ಉಹಾಪೋಹಗಳನ್ನು ಹರಿಬಿಡಲಾಗುತ್ತಿದೆ. ಜನರಲ್ಲಿ ಬಂದಿರುವ ತಪ್ಪು ಕಲ್ಪನೆ ನಿವಾರಿಸಲು ಏ.21ರಂದು (ಬುಧವಾರ) ಆ ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೋವಿಡ್ ತಪಾಸಣೆ ಶಿಬಿರವನ್ನು ನಡೆಸಲಾಗುವುದು. ಜನರಲ್ಲಿರುವ ಆತಂಕ ದೂರ ಮಾಡಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>