<p><strong>ಬೆಳಗಾವಿ:</strong> ತಾಲ್ಲೂಕಿನ ಬಡಾಲ ಅಂಕಲಗಿಯಲ್ಲಿ ₹ 50 ಲಕ್ಷ ವೆಚ್ಚದಲ್ಲಿ ಗ್ರಾಮ ದೇವಿ ದೇವಸ್ಥಾನ ಜೀರ್ಣೋದ್ಧಾರ ಹಾಗೂ ಯಾತ್ರಿ ನಿವಾಸ ನಿರ್ಮಾಣ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಂಗಳವಾರ ಚಾಲನೆ ನೀಡಿದರು.</p>.<p>ಪ್ರವಾಸೋದ್ಯಮ ಇಲಾಖೆ ಅನುದಾನದಲ್ಲಿ ಭೂಸೇನಾ ನಿಗಮದಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ ಬಂದ ಶಾಸಕರನ್ನು ಗ್ರಾಮಸ್ಥರು ಮೆರವಣಿಗೆ ಮೂಲಕ ಸಂಭ್ರಮದಿಂದ ಸ್ವಾಗತಿಸಿದರು.</p>.<p>‘ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿವೆ. ಅವುಗಳ ಜೀರ್ಣೋದ್ಧಾರ ಕಾರ್ಯವನ್ನು ಎಲ್ಲರೂ ಕೂಡಿ ಮಾಡಬೇಕಿದೆ’ ಎಂದು ಲಕ್ಷ್ಮಿ ಹೇಳಿದರು.</p>.<p>‘ಈಗಿನ ಯುವಜನರು ದೇವಸ್ಥಾನಗಳಿಗೆ ಹೋಗುವುದು ಕಡಿಮೆಯಾಗಿದೆ. ಅವರಲ್ಲಿ ಒಳ್ಳೆಯ ಸಂಸ್ಕಾರ ಹಾಗೂ ಅಧ್ಯಾತ್ಮದ ವಿಷಯಗಳನ್ನು ಬಿತ್ತಬೇಕು. ಇದರಿಂದ ಸಮಾಜದಲ್ಲಿ ಸುಖ, ಶಾಂತಿ, ನೆಮ್ಮದಿ ಕಾಣಲು ಸಾಧ್ಯ’ ಎಂದರು.</p>.<p>ಮುಖಂಡರಾದ ಸಿ.ಸಿ. ಪಾಟೀಲ, ಸುರೇಶ ಇಟಗಿ, ಗೌಸ್ ಜಾಲಿಕೊಪ್ಪ, ಶ್ರೀಕಾಂತ ಮದುಭರಮಣ್ಣವರ, ರಾಮನಗೌಡ ಪಾಟೀಲ, ಸಿದ್ದಪ್ಪ ಚಾಪಗಾಂವ, ಪಡೆಪ್ಪ ಅರಳಿಕಟ್ಟಿ, ಅರ್ಜುನ ಅರ್ಜುನವಾಡಿ, ಪ್ರಕಾಶ ಬೆಳಗಾವಿ, ಸೋಮನಗೌಡ ಪಾಟೀಲ, ವಿಠ್ಠಲ ಅರ್ಜುನವಾಡಿ, ರಾಮಪ್ಪ ಕೊಳೆಪ್ಪನವರ, ಶಂಕರ ಚಾಪಗಾಂವ, ರಾಮಪ್ಪ ಶೀಗಿಹಳ್ಳಿ ಇದ್ದರು.</p>.<p>ಹಲಗಾ–ಬಸ್ತವಾಡ: ₹ 90 ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ಹಲಗಾ-ಬಸ್ತವಾಡ ಗ್ರಾಮಗಳ ರಸ್ತೆಗಳ ಅಭಿವೃದ್ಧಿಗೆ ಶಾಸಕರು ಸೋಮವಾರ ಚಾಲನೆ ನೀಡಿದರು.</p>.<p>‘ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ. ಇಡೀ ಕ್ಷೇತ್ರ ಅಭಿವೃದ್ಧಿ ಆಗಬೇಕು ಮತ್ತು ಜನರ ಸಂಕಷ್ಟ ದೂರವಾಗಬೇಕು ಎನ್ನುವುದಷ್ಟೆ ನನ್ನ ಗುರಿ. ಹಿಂದಿದ್ದವರು ಏಕೆ ಮಾಡಿಲ್ಲ ಎನ್ನುವುದನ್ನೆಲ್ಲ ಕೆದಕುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ತಾಲ್ಲೂಕಿನ ಬಡಾಲ ಅಂಕಲಗಿಯಲ್ಲಿ ₹ 50 ಲಕ್ಷ ವೆಚ್ಚದಲ್ಲಿ ಗ್ರಾಮ ದೇವಿ ದೇವಸ್ಥಾನ ಜೀರ್ಣೋದ್ಧಾರ ಹಾಗೂ ಯಾತ್ರಿ ನಿವಾಸ ನಿರ್ಮಾಣ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಂಗಳವಾರ ಚಾಲನೆ ನೀಡಿದರು.</p>.<p>ಪ್ರವಾಸೋದ್ಯಮ ಇಲಾಖೆ ಅನುದಾನದಲ್ಲಿ ಭೂಸೇನಾ ನಿಗಮದಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ ಬಂದ ಶಾಸಕರನ್ನು ಗ್ರಾಮಸ್ಥರು ಮೆರವಣಿಗೆ ಮೂಲಕ ಸಂಭ್ರಮದಿಂದ ಸ್ವಾಗತಿಸಿದರು.</p>.<p>‘ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿವೆ. ಅವುಗಳ ಜೀರ್ಣೋದ್ಧಾರ ಕಾರ್ಯವನ್ನು ಎಲ್ಲರೂ ಕೂಡಿ ಮಾಡಬೇಕಿದೆ’ ಎಂದು ಲಕ್ಷ್ಮಿ ಹೇಳಿದರು.</p>.<p>‘ಈಗಿನ ಯುವಜನರು ದೇವಸ್ಥಾನಗಳಿಗೆ ಹೋಗುವುದು ಕಡಿಮೆಯಾಗಿದೆ. ಅವರಲ್ಲಿ ಒಳ್ಳೆಯ ಸಂಸ್ಕಾರ ಹಾಗೂ ಅಧ್ಯಾತ್ಮದ ವಿಷಯಗಳನ್ನು ಬಿತ್ತಬೇಕು. ಇದರಿಂದ ಸಮಾಜದಲ್ಲಿ ಸುಖ, ಶಾಂತಿ, ನೆಮ್ಮದಿ ಕಾಣಲು ಸಾಧ್ಯ’ ಎಂದರು.</p>.<p>ಮುಖಂಡರಾದ ಸಿ.ಸಿ. ಪಾಟೀಲ, ಸುರೇಶ ಇಟಗಿ, ಗೌಸ್ ಜಾಲಿಕೊಪ್ಪ, ಶ್ರೀಕಾಂತ ಮದುಭರಮಣ್ಣವರ, ರಾಮನಗೌಡ ಪಾಟೀಲ, ಸಿದ್ದಪ್ಪ ಚಾಪಗಾಂವ, ಪಡೆಪ್ಪ ಅರಳಿಕಟ್ಟಿ, ಅರ್ಜುನ ಅರ್ಜುನವಾಡಿ, ಪ್ರಕಾಶ ಬೆಳಗಾವಿ, ಸೋಮನಗೌಡ ಪಾಟೀಲ, ವಿಠ್ಠಲ ಅರ್ಜುನವಾಡಿ, ರಾಮಪ್ಪ ಕೊಳೆಪ್ಪನವರ, ಶಂಕರ ಚಾಪಗಾಂವ, ರಾಮಪ್ಪ ಶೀಗಿಹಳ್ಳಿ ಇದ್ದರು.</p>.<p>ಹಲಗಾ–ಬಸ್ತವಾಡ: ₹ 90 ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ಹಲಗಾ-ಬಸ್ತವಾಡ ಗ್ರಾಮಗಳ ರಸ್ತೆಗಳ ಅಭಿವೃದ್ಧಿಗೆ ಶಾಸಕರು ಸೋಮವಾರ ಚಾಲನೆ ನೀಡಿದರು.</p>.<p>‘ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ. ಇಡೀ ಕ್ಷೇತ್ರ ಅಭಿವೃದ್ಧಿ ಆಗಬೇಕು ಮತ್ತು ಜನರ ಸಂಕಷ್ಟ ದೂರವಾಗಬೇಕು ಎನ್ನುವುದಷ್ಟೆ ನನ್ನ ಗುರಿ. ಹಿಂದಿದ್ದವರು ಏಕೆ ಮಾಡಿಲ್ಲ ಎನ್ನುವುದನ್ನೆಲ್ಲ ಕೆದಕುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>