<p>ಬೆಳಗಾವಿ: ‘ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಮೀನು ಮಾರುಕಟ್ಟೆ ಅಭಿವೃದ್ಧಿಗೆ ಮೊದಲ ಹಂತದಲ್ಲಿ ₹ 50 ಲಕ್ಷ ಅನುದಾನ ಬಿಡುಗಡೆಯಾಗಿದೆ’ ಎಂದು ಉತ್ತರ ವಲಯ ಶಾಸಕ ಅನಿಲ ಬೆನಕೆ ತಿಳಿಸಿದರು.</p>.<p>‘ಮೀನುಗಾರಿಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಅವರು ಅನುದಾನ ಬಿಡುಗಡೆ ಮಾಡಿಸಿದ್ದಾರೆ. ಅದರಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>‘ಕ್ಷೇತ್ರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ, ನಗರಾಭಿವೃದ್ಧಿ ಯೋಜನೆಯಿಂದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಆದಷ್ಟು ಬೇಗನೆ ಮೀನು ಮಾರುಕಟ್ಟೆ ಕಾಮಗಾರಿ ಕೈಗೆತ್ತಿಕೊಂಡು ಅಭಿವೃದ್ಧಿಪಡಿಸಲಾಗುವುದು. 2ನೇ ಹಂತದಲ್ಲಿ ₹ 50 ಲಕ್ಷ ಅನುದಾನಕ್ಕಾಗಿ ಸಚಿವರನ್ನು ಕೋರಲಾಗಿದೆ’ ಎಂದು ಹೇಳಿದರು.</p>.<p>ಮೀನುಗಾರಿಕೆ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ಎಂ.ಎಲ್. ದೊಡ್ಡಮನಿ, ಎಂಜಿನಿಯರ್ ಅಮರನಾಥ, ಉಪ ನಿರ್ದೇಶಕ ಶ್ರೀಪಾದ ಕುಲಕರ್ಣಿ ಇದ್ದರು.</p>.<p>ಇದಕ್ಕೂ ಮುನ್ನ ಶಾಸಕರು, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಆಂಜನೇಯ ನಗರ, ಕಣಬರ್ಗಿ ಹಾಗೂ ರಾಮತೀರ್ಥ ನಗರದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.</p>.<p>ನಿಗದಿತ ಅವಧಿ ಮುಗಿದರೂ ಕೆಲವು ಕಾಮಗಾರಿಗಳು ಪೂರ್ಣಗೊಂಡಿಲ್ಲದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.</p>.<p>ಸ್ಮಾರ್ಟ್ ಸಿಟಿ ನಿರ್ದೇಶಕ ಶಶಿಧರ ಕುರೇರ ಇದ್ದರು.</p>.<p>ರುಕ್ಮಿಣಿ ನಗರದಲ್ಲಿ ಲೋಕೋಪಯೋಗಿ ಇಲಾಖೆಯಿಂದ ₹ 20 ಲಕ್ಷ ಅನುದಾನದಲ್ಲಿ ಕೈಗೊಂಡಿರುವ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ಪೂಜೆ ನೆರವೇರಿಸಿ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಮೀನು ಮಾರುಕಟ್ಟೆ ಅಭಿವೃದ್ಧಿಗೆ ಮೊದಲ ಹಂತದಲ್ಲಿ ₹ 50 ಲಕ್ಷ ಅನುದಾನ ಬಿಡುಗಡೆಯಾಗಿದೆ’ ಎಂದು ಉತ್ತರ ವಲಯ ಶಾಸಕ ಅನಿಲ ಬೆನಕೆ ತಿಳಿಸಿದರು.</p>.<p>‘ಮೀನುಗಾರಿಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಅವರು ಅನುದಾನ ಬಿಡುಗಡೆ ಮಾಡಿಸಿದ್ದಾರೆ. ಅದರಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>‘ಕ್ಷೇತ್ರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ, ನಗರಾಭಿವೃದ್ಧಿ ಯೋಜನೆಯಿಂದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಆದಷ್ಟು ಬೇಗನೆ ಮೀನು ಮಾರುಕಟ್ಟೆ ಕಾಮಗಾರಿ ಕೈಗೆತ್ತಿಕೊಂಡು ಅಭಿವೃದ್ಧಿಪಡಿಸಲಾಗುವುದು. 2ನೇ ಹಂತದಲ್ಲಿ ₹ 50 ಲಕ್ಷ ಅನುದಾನಕ್ಕಾಗಿ ಸಚಿವರನ್ನು ಕೋರಲಾಗಿದೆ’ ಎಂದು ಹೇಳಿದರು.</p>.<p>ಮೀನುಗಾರಿಕೆ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ಎಂ.ಎಲ್. ದೊಡ್ಡಮನಿ, ಎಂಜಿನಿಯರ್ ಅಮರನಾಥ, ಉಪ ನಿರ್ದೇಶಕ ಶ್ರೀಪಾದ ಕುಲಕರ್ಣಿ ಇದ್ದರು.</p>.<p>ಇದಕ್ಕೂ ಮುನ್ನ ಶಾಸಕರು, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಆಂಜನೇಯ ನಗರ, ಕಣಬರ್ಗಿ ಹಾಗೂ ರಾಮತೀರ್ಥ ನಗರದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.</p>.<p>ನಿಗದಿತ ಅವಧಿ ಮುಗಿದರೂ ಕೆಲವು ಕಾಮಗಾರಿಗಳು ಪೂರ್ಣಗೊಂಡಿಲ್ಲದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.</p>.<p>ಸ್ಮಾರ್ಟ್ ಸಿಟಿ ನಿರ್ದೇಶಕ ಶಶಿಧರ ಕುರೇರ ಇದ್ದರು.</p>.<p>ರುಕ್ಮಿಣಿ ನಗರದಲ್ಲಿ ಲೋಕೋಪಯೋಗಿ ಇಲಾಖೆಯಿಂದ ₹ 20 ಲಕ್ಷ ಅನುದಾನದಲ್ಲಿ ಕೈಗೊಂಡಿರುವ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ಪೂಜೆ ನೆರವೇರಿಸಿ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>