ಬೆಳಗಾವಿ: ಇಲ್ಲಿನ ಕೆಎಲ್ಎಸ್ ಗೋಗಟೆ ತಾಂತ್ರಿಕ ಕಾಲೇಜಿನ ಮಾಹಿತಿ ವಿಜ್ಞಾನ ವಿಭಾಗ ಅಭಿವೃದ್ಧಿಪಡಿಸಿದ ‘ಸ್ಮಾರ್ಟ್ ಸಂಪರ್ಕ್’ ಎಂಬ ಆರಂಭಿಕ ಕಲ್ಪನೆಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ– ಕೃಷಿ ಮತ್ತು ಸಂಬಂಧಿತ ವಲಯಗಳ ಪುನರುಜ್ಜೀವನಗೊಳಿಸುವಿಕೆ (ಆರ್ಕೆವಿವೈ–ಆರ್ಎಎಫ್ಟಿಎಆರ್) ಮತ್ತು ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಕೃಷಿಕ-ಅಗ್ರಿ ಬಿಸಿನೆಸ್ ಇನ್ಕ್ಯುಬೇಟರ್ ವತಿಯಿಂದ ₹ 5 ಲಕ್ಷ ಅನುದಾನ ದೊರೆತಿದೆ.