<p><strong>ಬೆಳಗಾವಿ: </strong>ಹೊಸದಾಗಿ ಜಾರಿಗೊಳಿಸಲಾಗಿರುವ ‘ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ಯೋಜನೆ’ಯಲ್ಲಿ 2021–2022ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಈವರೆಗೆ 51,447 ವಿದ್ಯಾರ್ಥಿಗಳಿಗೆ ₹ 12.41 ಕೋಟಿ ಶಿಷ್ಯವೇತನ ಜಮೆಯಾಗಿದೆ.</p>.<p>ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕವಾಗಿ ನೆರವಾಗುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಚೆಗೆ ಯೋಜನೆ ಅನುಷ್ಠಾನಗೊಳಿಸಿದ್ದರು. ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿದ್ಯಾರ್ಥಿಗಳು ಶಿಷ್ಯವೇತನ ಕೋರಿ ಆನ್ಲೈನ್ನಲ್ಲಿ ನಿಗದಿತ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುತ್ತಿದ್ದಾರೆ. ಈ ಪೈಕಿ ಈವರೆಗೆ ಮೊದಲನೇ ಹಂತದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ಕಲ್ಪಿಸಲಾಗಿದೆ.</p>.<p>‘ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆಯಾಗಿದೆ. ದ್ವಿತೀಯ ಪಿಯುಸಿಗೆ ದಾಖಲಾಗುತ್ತಿದ್ದಂತೆಯೇ ಅದರು ಕಾಲೇಜುಗಳಲ್ಲಿ ನೀಡುವ ದತ್ತಾಂಶದ ಆಧಾರದ ಮೇಲೆ ಅವರವರ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಾಗಿದೆ. ವಿದ್ಯಾರ್ಥಿಗಳಿಗೆ ತಲಾ ₹ 2,500 ಮತ್ತು ವಿದ್ಯಾರ್ಥಿನಿಯರಿಗೆ ತಲಾ ₹ 3ಸಾವಿರ ನೀಡಲಾಗಿದೆ’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ‘ಪ್ರಜಾವಾಣಿ‘ಗೆ ತಿಳಿಸಿದರು.</p>.<p class="Subhead"><strong>ಇತರ ವಿದ್ಯಾರ್ಥಿವೇತನ ಪಡೆದವರಿಗೂ:</strong></p>.<p>‘ಯೋಜನೆಯು ಮುಂದುವರಿದಿದ್ದು, ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಆ ವಿದ್ಯಾರ್ಥಿಯ ತಂದೆ–ತಾಯಿಗೆ ಜಮೀನು ಇದೆಯೋ ಇಲ್ಲವೋ ಎನ್ನುವುದನ್ನು ಖಚಿತಪಡಿಸಿಕೊಂಡು ನೆರವು ಕಲ್ಪಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.</p>.<p>‘ರೈತರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹಿಸುವ ಯೋಜನೆ ಇದಾಗಿದೆ. ಮೆಟ್ರಿಕ್ ನಂತರದ ಹೆಚ್ಚಿನ ಶಿಕ್ಷಣಕ್ಕಾಗಿ ರಾಜ್ಯದಲ್ಲಿ ಮಾನ್ಯತೆ ಪಡೆದ ಯಾವುದೇ ಶಿಕ್ಷಣ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯುವ ರೈತರ ಮಕ್ಕಳಿಗೆ ಅವರ ಕೋರ್ಸ್ಗಳಿಗೆ ಅನುಗಣವಾಗಿ ₹ 2500ರಿಂದ ₹ 11ಸಾವಿರದವರೆಗೆ ಶಿಷ್ಯವೇತನ ಕೊಡಲಾಗುವುದು. ಇತರ ವಿದ್ಯಾರ್ಥಿವೇತನಗಳನ್ನು ಪಡೆದವರು ಕೂಡ ರೈತ ವಿದ್ಯಾನಿಧಿ ಶಿಷ್ಯವೇತನಕ್ಕೆ ಅರ್ಹರಾಗಿರುತ್ತಾರೆ. ವಿದ್ಯಾರ್ಥಿಯ ತಂದೆ ಅಥವಾ ತಾಯಿ ರೈತರ ಗುರುತಿನ ಸಂಖ್ಯೆ (ಎಫ್ಐಡಿ) ಹೊಂದಿರಬೇಕಾಗುತ್ತದೆ. ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ’ ಎನ್ನುತ್ತಾರೆ ಅವರು.</p>.<p>ಈ ಶಿಷ್ಯವೇತನ ಯೋಜನೆಯನ್ನು 8ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಬಾಲಕಿಯರಿಗೆ ಕೂಡ ವಿಸ್ತರಿಸಿ ಈಚೆಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಅದರಂತೆ ಪ್ರತಿ ವಿದ್ಯಾರ್ಥಿನಿಗೆ ₹ 2ಸಾವಿರ ಶಿಷ್ಯವೇತನ ದೊರೆಯಲಿದೆ. ಈ ಮೂಲಕ ಮಹಿಳಾ ಶಿಕ್ಷಣಕ್ಕೆ ಪ್ರೋತ್ಸಾಹ ಕೊಡಲಾಗುತ್ತಿದೆ.</p>.<p class="Briefhead"><strong>ಯಾರಿಗೆ, ಎಷ್ಟು ಶಿಷ್ಯವೇತನ?</strong></p>.<p>* ಪಿಯುಸಿ, ಐಟಿಐ, ಡಿಪ್ಲೊಮಾ: ವಿದ್ಯಾರ್ಥಿಗಳಿಗೆ ₹2,500 ಹಾಗೂ ವಿದ್ಯಾರ್ಥಿನಿಯರಿಗೆ (ತೃತೀಯ ಲಿಂಗಿಗಳೂ ಸೇರಿ) ₹3,000</p>.<p>* ಪದವಿ: ವಿದ್ಯಾರ್ಥಿಗಳಿಗೆ ₹5ಸಾವಿರ. ವಿದ್ಯಾರ್ಥಿನಿಯರಿಗೆ ₹5,500.</p>.<p>* ಎಲ್ಎಲ್ಬಿ, ಪ್ಯಾರಾ ಮೆಡಿಕಲ್, ಬಿ.ಫಾರ್ಮ, ನರ್ಸಿಂಗ್ ಮೊದಲಾದ ವೃತ್ತಿಪರ ಕೋರ್ಸ್: ವಿದ್ಯಾರ್ಥಿಗಳಿಗೆ ₹7,500. ವಿದ್ಯಾರ್ಥಿನಿಯರಿಗೆ ₹8,000.</p>.<p>* ಎಂಬಿಬಿಎಸ್, ಬಿಇ, ಬಿ.ಟೆಕ್ ಹಾಗೂ ಸ್ನಾತಕೋತ್ತರ ಕೋರ್ಸ್: ವಿದ್ಯಾರ್ಥಿಗಳಿಗೆ ₹10ಸಾವಿರ. ವಿದ್ಯಾರ್ಥಿನಿಯರಿಗೆ: ₹11ಸಾವಿರ.</p>.<p><strong>(ಮಾಹಿತಿ: ಕೃಷಿ ಇಲಾಖೆ)</strong></p>.<p><strong>ನಿಧಿಯ ಪ್ರಗತಿ ಮಾಹಿತಿ</strong></p>.<p>ತಾಲ್ಲೂಕು;ವಿದ್ಯಾರ್ಥಿಗಳ ಸಂಖ್ಯೆ;ಮೊತ್ತ</p>.<p>ಚಿಕ್ಕೋಡಿ;6,990;₹ 1.70 ಕೋಟಿ</p>.<p>ಹುಕ್ಕೇರಿ;5,046;₹ 1.19 ಕೋಟಿ</p>.<p>ಬೆಳಗಾವಿ;4,265;1.04 ಕೋಟಿ</p>.<p>ಮೂಡಲಗಿ;1,243;₹ 33.70 ಲಕ್ಷ</p>.<p>ರಾಮದುರ್ಗ;3,376;₹80.45 ಲಕ್ಷ</p>.<p>ಖಾನಾಪುರ;2,749;₹ 65.72 ಲಕ್ಷ</p>.<p>ರಾಯಬಾಗ;4,326;₹ 1.03 ಕೋಟಿ</p>.<p>ಬೈಲಹೊಂಗಲ;4,667;₹1.15 ಕೋಟಿ</p>.<p>ಗೋಕಾಕ;7,937;₹ 1.90 ಕೋಟಿ</p>.<p>ಸವದತ್ತಿ;3,731;₹ 87.40 ಲಕ್ಷ</p>.<p><strong>(ಮಾಹಿತಿ: ಕೃಷಿ ಇಲಾಖೆ)</strong></p>.<p class="Subhead">***</p>.<p class="Subhead">ಯೋಜನೆಯಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಬಹುದು. ಕಾಲೇಜುಗಳಲ್ಲಿ ಹೆಚ್ಚಿನ ಮಾಹಿತಿ ದೊರೆಯಲಿದೆ. ಇದನ್ನು ಬಳಸಿಕೊಳ್ಳಬೇಕು.</p>.<p><strong>–ಶಿವನಗೌಡ ಪಾಟೀಲ, ಜಂಟಿ ನಿರ್ದೇಶಕ, ಕೃಷಿ ಇಲಾಖೆ, ಬೆಳಗಾವಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಹೊಸದಾಗಿ ಜಾರಿಗೊಳಿಸಲಾಗಿರುವ ‘ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ಯೋಜನೆ’ಯಲ್ಲಿ 2021–2022ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಈವರೆಗೆ 51,447 ವಿದ್ಯಾರ್ಥಿಗಳಿಗೆ ₹ 12.41 ಕೋಟಿ ಶಿಷ್ಯವೇತನ ಜಮೆಯಾಗಿದೆ.</p>.<p>ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕವಾಗಿ ನೆರವಾಗುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಚೆಗೆ ಯೋಜನೆ ಅನುಷ್ಠಾನಗೊಳಿಸಿದ್ದರು. ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿದ್ಯಾರ್ಥಿಗಳು ಶಿಷ್ಯವೇತನ ಕೋರಿ ಆನ್ಲೈನ್ನಲ್ಲಿ ನಿಗದಿತ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುತ್ತಿದ್ದಾರೆ. ಈ ಪೈಕಿ ಈವರೆಗೆ ಮೊದಲನೇ ಹಂತದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ಕಲ್ಪಿಸಲಾಗಿದೆ.</p>.<p>‘ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆಯಾಗಿದೆ. ದ್ವಿತೀಯ ಪಿಯುಸಿಗೆ ದಾಖಲಾಗುತ್ತಿದ್ದಂತೆಯೇ ಅದರು ಕಾಲೇಜುಗಳಲ್ಲಿ ನೀಡುವ ದತ್ತಾಂಶದ ಆಧಾರದ ಮೇಲೆ ಅವರವರ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಾಗಿದೆ. ವಿದ್ಯಾರ್ಥಿಗಳಿಗೆ ತಲಾ ₹ 2,500 ಮತ್ತು ವಿದ್ಯಾರ್ಥಿನಿಯರಿಗೆ ತಲಾ ₹ 3ಸಾವಿರ ನೀಡಲಾಗಿದೆ’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ‘ಪ್ರಜಾವಾಣಿ‘ಗೆ ತಿಳಿಸಿದರು.</p>.<p class="Subhead"><strong>ಇತರ ವಿದ್ಯಾರ್ಥಿವೇತನ ಪಡೆದವರಿಗೂ:</strong></p>.<p>‘ಯೋಜನೆಯು ಮುಂದುವರಿದಿದ್ದು, ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಆ ವಿದ್ಯಾರ್ಥಿಯ ತಂದೆ–ತಾಯಿಗೆ ಜಮೀನು ಇದೆಯೋ ಇಲ್ಲವೋ ಎನ್ನುವುದನ್ನು ಖಚಿತಪಡಿಸಿಕೊಂಡು ನೆರವು ಕಲ್ಪಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.</p>.<p>‘ರೈತರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹಿಸುವ ಯೋಜನೆ ಇದಾಗಿದೆ. ಮೆಟ್ರಿಕ್ ನಂತರದ ಹೆಚ್ಚಿನ ಶಿಕ್ಷಣಕ್ಕಾಗಿ ರಾಜ್ಯದಲ್ಲಿ ಮಾನ್ಯತೆ ಪಡೆದ ಯಾವುದೇ ಶಿಕ್ಷಣ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯುವ ರೈತರ ಮಕ್ಕಳಿಗೆ ಅವರ ಕೋರ್ಸ್ಗಳಿಗೆ ಅನುಗಣವಾಗಿ ₹ 2500ರಿಂದ ₹ 11ಸಾವಿರದವರೆಗೆ ಶಿಷ್ಯವೇತನ ಕೊಡಲಾಗುವುದು. ಇತರ ವಿದ್ಯಾರ್ಥಿವೇತನಗಳನ್ನು ಪಡೆದವರು ಕೂಡ ರೈತ ವಿದ್ಯಾನಿಧಿ ಶಿಷ್ಯವೇತನಕ್ಕೆ ಅರ್ಹರಾಗಿರುತ್ತಾರೆ. ವಿದ್ಯಾರ್ಥಿಯ ತಂದೆ ಅಥವಾ ತಾಯಿ ರೈತರ ಗುರುತಿನ ಸಂಖ್ಯೆ (ಎಫ್ಐಡಿ) ಹೊಂದಿರಬೇಕಾಗುತ್ತದೆ. ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ’ ಎನ್ನುತ್ತಾರೆ ಅವರು.</p>.<p>ಈ ಶಿಷ್ಯವೇತನ ಯೋಜನೆಯನ್ನು 8ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಬಾಲಕಿಯರಿಗೆ ಕೂಡ ವಿಸ್ತರಿಸಿ ಈಚೆಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಅದರಂತೆ ಪ್ರತಿ ವಿದ್ಯಾರ್ಥಿನಿಗೆ ₹ 2ಸಾವಿರ ಶಿಷ್ಯವೇತನ ದೊರೆಯಲಿದೆ. ಈ ಮೂಲಕ ಮಹಿಳಾ ಶಿಕ್ಷಣಕ್ಕೆ ಪ್ರೋತ್ಸಾಹ ಕೊಡಲಾಗುತ್ತಿದೆ.</p>.<p class="Briefhead"><strong>ಯಾರಿಗೆ, ಎಷ್ಟು ಶಿಷ್ಯವೇತನ?</strong></p>.<p>* ಪಿಯುಸಿ, ಐಟಿಐ, ಡಿಪ್ಲೊಮಾ: ವಿದ್ಯಾರ್ಥಿಗಳಿಗೆ ₹2,500 ಹಾಗೂ ವಿದ್ಯಾರ್ಥಿನಿಯರಿಗೆ (ತೃತೀಯ ಲಿಂಗಿಗಳೂ ಸೇರಿ) ₹3,000</p>.<p>* ಪದವಿ: ವಿದ್ಯಾರ್ಥಿಗಳಿಗೆ ₹5ಸಾವಿರ. ವಿದ್ಯಾರ್ಥಿನಿಯರಿಗೆ ₹5,500.</p>.<p>* ಎಲ್ಎಲ್ಬಿ, ಪ್ಯಾರಾ ಮೆಡಿಕಲ್, ಬಿ.ಫಾರ್ಮ, ನರ್ಸಿಂಗ್ ಮೊದಲಾದ ವೃತ್ತಿಪರ ಕೋರ್ಸ್: ವಿದ್ಯಾರ್ಥಿಗಳಿಗೆ ₹7,500. ವಿದ್ಯಾರ್ಥಿನಿಯರಿಗೆ ₹8,000.</p>.<p>* ಎಂಬಿಬಿಎಸ್, ಬಿಇ, ಬಿ.ಟೆಕ್ ಹಾಗೂ ಸ್ನಾತಕೋತ್ತರ ಕೋರ್ಸ್: ವಿದ್ಯಾರ್ಥಿಗಳಿಗೆ ₹10ಸಾವಿರ. ವಿದ್ಯಾರ್ಥಿನಿಯರಿಗೆ: ₹11ಸಾವಿರ.</p>.<p><strong>(ಮಾಹಿತಿ: ಕೃಷಿ ಇಲಾಖೆ)</strong></p>.<p><strong>ನಿಧಿಯ ಪ್ರಗತಿ ಮಾಹಿತಿ</strong></p>.<p>ತಾಲ್ಲೂಕು;ವಿದ್ಯಾರ್ಥಿಗಳ ಸಂಖ್ಯೆ;ಮೊತ್ತ</p>.<p>ಚಿಕ್ಕೋಡಿ;6,990;₹ 1.70 ಕೋಟಿ</p>.<p>ಹುಕ್ಕೇರಿ;5,046;₹ 1.19 ಕೋಟಿ</p>.<p>ಬೆಳಗಾವಿ;4,265;1.04 ಕೋಟಿ</p>.<p>ಮೂಡಲಗಿ;1,243;₹ 33.70 ಲಕ್ಷ</p>.<p>ರಾಮದುರ್ಗ;3,376;₹80.45 ಲಕ್ಷ</p>.<p>ಖಾನಾಪುರ;2,749;₹ 65.72 ಲಕ್ಷ</p>.<p>ರಾಯಬಾಗ;4,326;₹ 1.03 ಕೋಟಿ</p>.<p>ಬೈಲಹೊಂಗಲ;4,667;₹1.15 ಕೋಟಿ</p>.<p>ಗೋಕಾಕ;7,937;₹ 1.90 ಕೋಟಿ</p>.<p>ಸವದತ್ತಿ;3,731;₹ 87.40 ಲಕ್ಷ</p>.<p><strong>(ಮಾಹಿತಿ: ಕೃಷಿ ಇಲಾಖೆ)</strong></p>.<p class="Subhead">***</p>.<p class="Subhead">ಯೋಜನೆಯಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಬಹುದು. ಕಾಲೇಜುಗಳಲ್ಲಿ ಹೆಚ್ಚಿನ ಮಾಹಿತಿ ದೊರೆಯಲಿದೆ. ಇದನ್ನು ಬಳಸಿಕೊಳ್ಳಬೇಕು.</p>.<p><strong>–ಶಿವನಗೌಡ ಪಾಟೀಲ, ಜಂಟಿ ನಿರ್ದೇಶಕ, ಕೃಷಿ ಇಲಾಖೆ, ಬೆಳಗಾವಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>