<p><strong>ಹುಕ್ಕೇರಿ: </strong>ತಾಲ್ಲೂಕಿನ ಹುಲ್ಲೋಳಿಹಟ್ಟಿಯ ಕುರುಬನಕೋಡಿಯಲ್ಲಿ ಬೇರೆ ಗ್ರಾಮದವರು ನಿರ್ಮಿಸುತ್ತಿರುವ ತೆರೆದಬಾವಿ ಮುಚ್ಚಿಸಬೇಕು ಎಂದು ಆಗ್ರಹಿಸಿ ರೈತರು ಭಾನುವಾರ ಪ್ರತಿಭಟನೆ ನಡೆಸಿದರು.</p>.<p>‘ಹುಲ್ಲೋಳಿ ಹಟ್ಟಿಯಲ್ಲಿ ಮೊದಲಿನಿಂದಲೂ ಕುಡಿಯುವ ನೀರಿಗೆ ಪರದಾಡುತ್ತಿದ್ದೇವೆ. ನೀರಾವರಿ ಸೌಲಭ್ಯ ಕಲ್ಪಿಸಲು ಸಣ್ಣ ನೀರಾವರಿ ಇಲಾಖೆಯು ₹ 2 ಕೋಟಿ ವೆಚ್ಚದಲ್ಲಿ ಕೆರೆ ನಿರ್ಮಾಣಕ್ಕೆ ಮಂಜೂರಾತಿ ನೀಡಿದೆ. ಕೆಲವರು ಕೆರೆ ಪಕ್ಕದಲ್ಲಿ ಬಾವಿ ತೋಡಿ ಪೈಪ್ಲೈನ್ ಅಳವಡಿಸಲು ಮುಂದಾಗಿದ್ದಾರೆ. ಇದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಲಾಯಿತು’ ಎಂದು ರೈತರು ತಿಳಿಸಿದರು.</p>.<p>ಕ್ಷೇತ್ರದ ಶಾಸಕರು ಇತ್ತ ಗಮನಹರಿಸಬೇಕು ಎಂದು ಆಗ್ರಹಿಸಿದರು. ಕಾಡಪ್ಪ ಮಲ್ಲಪ್ಪ ಕುಗಟೋಳಿ, ಅಣ್ಣಪ್ಪ ಸದಾಶಿವ ಮಾಳಗೆ, ರಾಮಗೌಡ ಮಲ್ಲಪ್ಪ ಕುಗಟೋಳಿ, ಚಿಕ್ಕಪ್ಪ ಬಾಬು ರಜಪೂತ, ವಕೀಲ ಬಿ.ಎಸ್. ಕರಡಿ, ಬಸಗೌಡ ಪಾಟೀಲ, ಸಿದಗಿರೆಪ್ಪ ಅಪ್ಪಾಸಾಹೇಬ ಕುಗಟೋಳಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ: </strong>ತಾಲ್ಲೂಕಿನ ಹುಲ್ಲೋಳಿಹಟ್ಟಿಯ ಕುರುಬನಕೋಡಿಯಲ್ಲಿ ಬೇರೆ ಗ್ರಾಮದವರು ನಿರ್ಮಿಸುತ್ತಿರುವ ತೆರೆದಬಾವಿ ಮುಚ್ಚಿಸಬೇಕು ಎಂದು ಆಗ್ರಹಿಸಿ ರೈತರು ಭಾನುವಾರ ಪ್ರತಿಭಟನೆ ನಡೆಸಿದರು.</p>.<p>‘ಹುಲ್ಲೋಳಿ ಹಟ್ಟಿಯಲ್ಲಿ ಮೊದಲಿನಿಂದಲೂ ಕುಡಿಯುವ ನೀರಿಗೆ ಪರದಾಡುತ್ತಿದ್ದೇವೆ. ನೀರಾವರಿ ಸೌಲಭ್ಯ ಕಲ್ಪಿಸಲು ಸಣ್ಣ ನೀರಾವರಿ ಇಲಾಖೆಯು ₹ 2 ಕೋಟಿ ವೆಚ್ಚದಲ್ಲಿ ಕೆರೆ ನಿರ್ಮಾಣಕ್ಕೆ ಮಂಜೂರಾತಿ ನೀಡಿದೆ. ಕೆಲವರು ಕೆರೆ ಪಕ್ಕದಲ್ಲಿ ಬಾವಿ ತೋಡಿ ಪೈಪ್ಲೈನ್ ಅಳವಡಿಸಲು ಮುಂದಾಗಿದ್ದಾರೆ. ಇದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಲಾಯಿತು’ ಎಂದು ರೈತರು ತಿಳಿಸಿದರು.</p>.<p>ಕ್ಷೇತ್ರದ ಶಾಸಕರು ಇತ್ತ ಗಮನಹರಿಸಬೇಕು ಎಂದು ಆಗ್ರಹಿಸಿದರು. ಕಾಡಪ್ಪ ಮಲ್ಲಪ್ಪ ಕುಗಟೋಳಿ, ಅಣ್ಣಪ್ಪ ಸದಾಶಿವ ಮಾಳಗೆ, ರಾಮಗೌಡ ಮಲ್ಲಪ್ಪ ಕುಗಟೋಳಿ, ಚಿಕ್ಕಪ್ಪ ಬಾಬು ರಜಪೂತ, ವಕೀಲ ಬಿ.ಎಸ್. ಕರಡಿ, ಬಸಗೌಡ ಪಾಟೀಲ, ಸಿದಗಿರೆಪ್ಪ ಅಪ್ಪಾಸಾಹೇಬ ಕುಗಟೋಳಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>