‘ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಆ. 8ರಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಿದೆ. ಹಲವು ಪ್ರದೇಶಗಳಿಗೆ ಆಹಾರದ ಪೊಟ್ಟಣ, ಕುಡಿಯುವ ನೀರಿನ ಬಾಟಲಿಗಳು ಹಾಗೂ ಪರಿಹಾರ ಸಾಮಗ್ರಿಗಳನ್ನು ಇಳಿಸಿ ಜನರಿಗೆ ನೆರವಾಗಿದ್ದೇವೆ. ನಿರಾಶ್ರಿತರ ವಸ್ತುಗಳನ್ನು ಕೂಡ ಸಾಗಿಸಿದ್ದೇವೆ. ಹಂಪಿ ಪ್ರದೇಶವೊಂದರಲ್ಲೇ 200ಕ್ಕೂ ಹೆಚ್ಚಿನ ಜನರನ್ನು ರಕ್ಷಣೆ ಮಾಡಿದ್ದೇವೆ. ಇದರಲ್ಲಿ ಅನೇಕ ವಿದೇಶಿಯರೂ ಸೇರಿದ್ದಾರೆ. ಅನೇಕ ಕಡೆಗಳಲ್ಲಿ ಹವಾಮಾನ ಸಹಕರಿಸುತ್ತಿರಲಿಲ್ಲ. ಈ ನಡುವೆಯೂ ಕಾರ್ಯಾಚರಣೆ ನಡೆಸಿದ್ದೇವೆ’ ಎಂದು ಮಾಹಿತಿ ನೀಡಿದರು.