‘ರಾಷ್ಟ್ರೀಯ ಹೆದ್ದಾರಿ 548ರ ಚಿಕ್ಕೋಡಿ– ಗೋಟೂರು ಹೆದ್ದಾರಿಯನ್ನು ಚಿಕ್ಕೋಡಿ ಪಟ್ಟಣದ ಹೊರ ವಲಯದಲ್ಲಿ ಬೈಪಾಸ್ ರಸ್ತೆ ಸೇರಿದಂತೆ ಹೆದ್ದಾರಿ ನಿರ್ಮಿಸಲು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಲಾಗಿತ್ತು. ಚೆನೈ– ಮುಂಬೈ ನಡುವೆ ರಾಷ್ಟ್ರೀಯ ಹೆದ್ದಾರಿ 548ರ ಸಂಪರ್ಕ ಕಲ್ಪಿಸುವ ಮೂಲಕ ಉತ್ತರ ಕರ್ನಾಟಕದ ಆರ್ಥಿಕ ಚಟುವಟಿಕೆಗಳಿಗೆ ಈ ಹೆದ್ದಾರಿ ಅನುಕೂಲವಾಗಲಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.