ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತಕ್ಕೆ ಬಂದ ಯೋಧ, ಚನ್ನಮ್ಮನ ಅಶ್ವಾರೂಢ ಪ್ರತಿಮೆಗೆ ಹೂವಿನ ಮಾಲೆ ಹಾಕಿ ಗೌರವ ಸಲ್ಲಿಸಿದರು. ಎಪಿಎಂಸಿ ಗಣೇಶ ದೇವಸ್ಥಾನ, ಇಂಚಲ ಕ್ರಾಸ್, ಬಸ್ ನಿಲ್ದಾಣ, ರಾಯಣ್ಣ ವೃತ್ತದವರೆಗೆ ತೆರೆದ ವಾಹನದಲ್ಲಿ ಯೋಧನನ್ನು ಮೆರವಣಿಗೆ ಮಾಡಲಾಯಿತು. ಮಾಜಿ ಸೈನಿಕರು, ಯೋಧನ ಕುಟುಂಬಸ್ಥರು ಬೈಕ್ ರ್ಯಾಲಿ ನಡೆಸಿ ಯೋಧನಿಗೆ ಗೌರವ ಸೂಚಿಸಿದರು.