ಬೆಳಗಾವಿ: ಸಿಡಿಲು ಬಡಿದು ವ್ಯಕ್ತಿ ಸಾವು

ಬೆಳಗಾವಿ: ಖಾನಾಪುರ ತಾಲ್ಲೂಕಿನ ನಿಡಗಲ್ ಗ್ರಾಮದಲ್ಲಿ ಇಟ್ಟಿಗೆ ತಯಾರಿಕೆಯಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬರು ಸಿಡಿಲು ಬಡಿದ ಪರಿಣಾಮ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.
ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕು ಅಸು ಗ್ರಾಮದ ನಿವಾಸಿ ಗುರುನಾಥ ಪಾಂಡುರಂಗ ನಾರ್ವೇಕರ್ (20)ಎಂದು ಗುರುತಿಸಲಾಗಿದೆ.
ಅವರು ಕೆಲವು ದಿನಗಳ ಹಿಂದೆ ಕುಟುಂಬದೊಂದಿಗೆ ನಿಡಗಲ್ ಗ್ರಾಮಕ್ಕೆ ಬಂದಿದ್ದರು.
ಸ್ಥಳಕ್ಕೆ ಖಾನಾಪುರ ಠಾಣೆ ಪೊಲೀಸರು ಭೇಟಿ ನೀಡಿದ್ದರು. ಪ್ರಕರಣ ದಾಖಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.