‘ಮಾಂಜಾ ದಾರ ತಯಾರಿಸುವವರು, ಮಾರುವವರು ಮತ್ತು ಅದನ್ನು ಖರೀದಿಸಿ ಬಳಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ದಾರ ಬಳಸಿ ಗಾಳಿಪಟ ಹಾರಿಸದಂತೆ ಪೋಷಕರು ಮಕ್ಕಳಿಗೆ ತಿಳಿ ಹೇಳಬೇಕು. ತಯಾರಿಸುವವರು ಮತ್ತು ಮಾರುವವರು ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು’ ಎಂದು ನಗರ ಪೊಲೀಸ್ ಆಯುಕ್ತ ತ್ಯಾಗರಾಜನ್ ತಿಳಿಸಿದ್ದಾರೆ.