ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ನದಿಯಲ್ಲಿ ಸಿಲುಕಿದ ಯುವಕನ ರಕ್ಷಣೆಗೆ ಹರಸಾಹಸ

Last Updated 19 ಜೂನ್ 2021, 8:33 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಸಿದ್ನಾಳ ಗ್ರಾಮದ ಹತ್ತಿರ ವೇದಗಂಗಾ ನದಿಯಲ್ಲಿ ಸಿಲುಕಿರುವ ಯುವಕನ ರಕ್ಷಣೆಗೆ ಎನ್‌ಡಿಆರ್‌ಎಫ್‌ ತಂಡದವರು ಕಾರ್ಯಾಚರಣೆ ಆರಂಭಿಸಿದ್ದಾರೆ.

ಆ ಯುವಕ ಕಾಲು ಜಾರಿ ಬಿದ್ದು ನದಿಯಲ್ಲಿ ಕೊಚ್ಚಿಕೊಂಡು ಹೋಗುವಾಗ, ನದಿಯೊಳಗೆ ಬಿದ್ದಿರುವ ಮರವೇರಿ ಕುಳಿತಿದ್ದಾರೆ. ನದಿಯ ಮಧ್ಯದಲ್ಲಿ ಅವರು ಸಿಲುಕಿದ್ದಾರೆ. ಅವರನ್ನು ಪ್ರಜ್ವಲ್ ಕುಲಕರ್ಣಿ ಎಂದು ಗುರುತಿಸಲಾಗಿದೆ.

ಎನ್‌ಡಿಆರ್‌ಎಫ್‌, ಅಗ್ನಿಶಾಮಕ ದಳ, ಪೊಲೀಸರು ನಡೆಸಿರುವ ಕಾರ್ಯಾಚರಣೆಗೆ ಸ್ಥಳೀಯರೂ ಕೈಜೋಡಿಸಿದ್ದಾರೆ. ನೀರು ರಭಸದಿಂದ ಹರಿಯುತ್ತಿದೆ. ಮಳೆಯೂ ಬೀಳುತ್ತಿರುವುದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT