ಇಲ್ಲಿನ ರಾಣಿ ಚನ್ನಮ್ಮನ ವೃತ್ತದ ಬಳಿ ಪ್ರತಿಭಟನೆಗೆ ಕುಳಿತ ಕಾರ್ಯಕರ್ತರು, ‘ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಹಿಂದೆ ರಾಜಕೀಯ ದುರುದ್ದೇಶವಿದೆ. ಹಾಗಾಗಿ ಕೇಜ್ರಿವಾಲ್ ಅವರಿಗೆ ಧೈರ್ಯ ತುಂಬುವುದಕ್ಕಾಗಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದೇವೆ’ ಎಂದು ತಿಳಿಸಿದರು. ಮುಖಂಡರಾದ ಶಂಕರ ಹೆಗಡೆ, ಎಂ.ಕೆ.ಸಯ್ಯದ್ ಇತರರು ಪಾಲ್ಗೊಂಡಿದ್ದರು.