‘ಉತ್ತರ, ದಕ್ಷಿಣ ಎಂದು ನೋಡಬೇಡಿ. ಎಲ್ಲರೂ ಮನುಷ್ಯರೇ. ಎಲ್ಲರಿಗೂ ನೀರು ಬೇಕು. ದಕ್ಷಿಣ ಕ್ಷೇತ್ರದಲ್ಲಿ ಸಮರ್ಪಕ ನೀರು ಪೂರೈಕೆಗಾಗಿ ಎಷ್ಟು ಓವರ್ಹೆಡ್ ಟ್ಯಾಂಕ್ಗಳನ್ನು ನಿರ್ಮಾಣ ಮಾಡಬೇಕು ಎನ್ನುವ ಬಗ್ಗೆ ಪ್ರಸ್ತಾವ ಸಿದ್ಧಪಡಿಸಿ ಸಲ್ಲಿಸಬೇಕು. 24x7 ನಿರಂತರ ನೀರು ಪೂರೈಕೆ ಯೋಜನೆ ನಗರದ ಎಲ್ಲ ವಾರ್ಡ್ಗಳಿಗೂ ವಿಸ್ತರಣೆ ಮಾಡಬೇಕು. ಈ ಕುರಿತು ಹಿರಿಯ ಅಧಿಕಾರಿಗಳೊಂದಿಗೂ ಚರ್ಚಿಸಲಾಗುವುದು. ಯೋಜನೆ ಕುರಿತು ಶೀಘ್ರವೇ ಮರು ಟೆಂಡರ್ ಕರೆಯುವಂತೆ ಒತ್ತಾಯಿಸಲಾಗುವುದು’ ಎಂದು ಹೇಳಿದರು.