<p><strong>ಬೆಳಗಾವಿ: </strong>ರಾಜ್ಯದ ಎಲ್ಲ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.</p>.<p>‘ಶಿಕ್ಷಣ ಎಲ್ಲರಿಗೂ ದೊರೆಯಬೇಕಾದ ಸಂಪತ್ತು. ಜಾತಿ, ಮತ, ಬಡವ ಮತ್ತು ಶ್ರೀಮಂತರೆನ್ನದೆ ಎಲ್ಲರಿಗೂ ಸಿಗುವಂತೆ ಮಾಡುವ ಹೊಣೆಗಾರಿಕೆ ಸರ್ಕಾರಗಳದ್ದು. ಈ ನಿಟ್ಟಿನಲ್ಲಿ 2018–19ನೇ ಸಾಲಿನ ಬಜೆಟ್ನಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪಂಗಡದವರು ಸೇರಿದಂತೆ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ಪಾಸ್ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ, ಈವರೆಗೂ ಯೋಜನೆ ಜಾರಿಗೆ ಬಂದಿಲ್ಲ. ಇದು ಖಂಡನೀಯ’ ಎಂದರು.</p>.<p>‘ರಾಜ್ಯದಾದ್ಯಂತ ಬರಗಾಲ ಪರಿಸ್ಥಿತಿ ಇದೆ. ರೈತ ಕುಟುಂಬಗಳು ಸಂಕಷ್ಟದಲ್ಲಿವೆ. ಈ ಸಂದರ್ಭದಲ್ಲಿ ಎಲ್ಲ ವಿದ್ಯಾರ್ಥಿಗಳಿಗೂ ಬಸ್ ಪಾಸ್ ಒದಗಿಸಿದರೆ, ಆ ಕುಟುಂಬಗಳಿಗೂ ನೆರವಾಗಲಿದೆ. ಹಳ್ಳಿಗಳಿಂದ ಪಟ್ಟಣ, ತಾಲ್ಲೂಕು, ಜಿಲ್ಲಾ ಕೇಂದ್ರಗಳಿಗೆ ಶಿಕ್ಷಣ ಪಡೆಯಲು ಹೋಗುವ ವಿದ್ಯಾರ್ಥಿಗಳಿಗೆ ಇನ್ನಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ’ ಎಂದು ತಿಳಿಸಿದರು.</p>.<p>‘ಕಳೆದ ವರ್ಷ ಹಣವಿಲ್ಲವೆಂಬ ನೆಪವೊಡ್ಡಿದ್ದ ಸರ್ಕಾರ, ಈ ವರ್ಷವೂ ವಿದ್ಯಾರ್ಥಿಗಳ ಬೇಡಿಕೆಯನ್ನು ಮೂಲೆಗುಂಪು ಮಾಡುವುದು ಸರಿಯಲ್ಲ’ ಎಂದು ಹೇಳಿದರು.</p>.<p>ಪದಾಧಿಕಾರಿಗಳಾದ ರೋಹಿತ ಉಮನಾಬಾದಿಮಠ, ಸಚಿನ್ ಹಿರೇಮಠ, ಕಿರಣ್, ವಿದ್ಯಾಪಾಟೀಲ, ಆನಂದ್ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ರಾಜ್ಯದ ಎಲ್ಲ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.</p>.<p>‘ಶಿಕ್ಷಣ ಎಲ್ಲರಿಗೂ ದೊರೆಯಬೇಕಾದ ಸಂಪತ್ತು. ಜಾತಿ, ಮತ, ಬಡವ ಮತ್ತು ಶ್ರೀಮಂತರೆನ್ನದೆ ಎಲ್ಲರಿಗೂ ಸಿಗುವಂತೆ ಮಾಡುವ ಹೊಣೆಗಾರಿಕೆ ಸರ್ಕಾರಗಳದ್ದು. ಈ ನಿಟ್ಟಿನಲ್ಲಿ 2018–19ನೇ ಸಾಲಿನ ಬಜೆಟ್ನಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪಂಗಡದವರು ಸೇರಿದಂತೆ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ಪಾಸ್ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ, ಈವರೆಗೂ ಯೋಜನೆ ಜಾರಿಗೆ ಬಂದಿಲ್ಲ. ಇದು ಖಂಡನೀಯ’ ಎಂದರು.</p>.<p>‘ರಾಜ್ಯದಾದ್ಯಂತ ಬರಗಾಲ ಪರಿಸ್ಥಿತಿ ಇದೆ. ರೈತ ಕುಟುಂಬಗಳು ಸಂಕಷ್ಟದಲ್ಲಿವೆ. ಈ ಸಂದರ್ಭದಲ್ಲಿ ಎಲ್ಲ ವಿದ್ಯಾರ್ಥಿಗಳಿಗೂ ಬಸ್ ಪಾಸ್ ಒದಗಿಸಿದರೆ, ಆ ಕುಟುಂಬಗಳಿಗೂ ನೆರವಾಗಲಿದೆ. ಹಳ್ಳಿಗಳಿಂದ ಪಟ್ಟಣ, ತಾಲ್ಲೂಕು, ಜಿಲ್ಲಾ ಕೇಂದ್ರಗಳಿಗೆ ಶಿಕ್ಷಣ ಪಡೆಯಲು ಹೋಗುವ ವಿದ್ಯಾರ್ಥಿಗಳಿಗೆ ಇನ್ನಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ’ ಎಂದು ತಿಳಿಸಿದರು.</p>.<p>‘ಕಳೆದ ವರ್ಷ ಹಣವಿಲ್ಲವೆಂಬ ನೆಪವೊಡ್ಡಿದ್ದ ಸರ್ಕಾರ, ಈ ವರ್ಷವೂ ವಿದ್ಯಾರ್ಥಿಗಳ ಬೇಡಿಕೆಯನ್ನು ಮೂಲೆಗುಂಪು ಮಾಡುವುದು ಸರಿಯಲ್ಲ’ ಎಂದು ಹೇಳಿದರು.</p>.<p>ಪದಾಧಿಕಾರಿಗಳಾದ ರೋಹಿತ ಉಮನಾಬಾದಿಮಠ, ಸಚಿನ್ ಹಿರೇಮಠ, ಕಿರಣ್, ವಿದ್ಯಾಪಾಟೀಲ, ಆನಂದ್ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>