ಬೆಳಗಾವಿ: ಜಿಲ್ಲೆಯ ಕಾಗವಾಡ ತಾಲ್ಲೂಕಿನ ಶೇಡಬಾಳ ಗ್ರಾಮದ ಜಮೀನುಗಳನ್ನು ಲೋಂಡಾ–ಮೀರಜ್ ರೈಲು ಮಾರ್ಗ ನಿರ್ಮಾಣ ಯೋಜನೆಗೆ ಭೂಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಪ್ರಸ್ತಾಪಿತ ಜಮೀನುಗಳ ಮಾಲೀಕರೊಂದಿಗೆ ಜುಲೈ 20ರಂದು ಬೆಳಿಗ್ಗೆ 11.30ಕ್ಕೆ ಕಾಗವಾಡ ಪ್ರವಾಸಿಮಂದಿರದಲ್ಲಿ ಸಭೆ ಕರೆಯಲಾಗಿದೆ ಎಂದು ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್ಕುಮಾರ್ ತಿಳಿಸಿದ್ದಾರೆ.