<p><strong>ಬೆಳಗಾವಿ: </strong>ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಿಸಿಕೊಂಡ ಕೃಷಿ ಹೊಂಡದ ಸಹಾಯಧನದ ಬಿಲ್ ಮಂಜೂರಾತಿಗೆ ಬುಧವಾರ ಲಂಚ ಪಡೆಯುತ್ತಿದ್ದ ಅಥಣಿ ತಾಲ್ಲೂಕು ಪಂಚಾಯಿತಿಯ ಎಂಜಿನಿಯರ್ ನಾಗಪ್ಪ ಭೀಮಪ್ಪ ಮೊಕಾಶಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಅಥಣಿ ತಾಲ್ಲೂಕಿನ ಅನಂತಪುರದ ಅಂಬರೀಷ ಸೋಮಲಿಂಗ ದುಗ್ಗಾಣಿ ನೀಡಿದ ದೂರಿನ ಮೇಲೆಗೆ ಎಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ‘₹ 6ಸಾವಿರ ಬೇಡಿಕೆ ಇಟ್ಟಿದ್ದ ನಾಗಪ್ಪ ಮುಂಗಡವಾಗಿ ₹ 3ಸಾವಿರ ಪಡೆದಿದ್ದರು. ಉಳಿದ ₹ 3ಸಾವಿರ ಪಡೆಯುವಾಗ ಅವರು ಸಿಕ್ಕಿಬಿದ್ದಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ. ಲಂಚವಾಗಿ ಪಡೆದ ಹಣವನ್ನು ಅವರಿಂದ ವಸೂಲಿ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದು ಎಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಡಿಎಸ್ಪಿ ಶರಣಪ್ಪ ಹಾಗೂ ಇನ್ಸ್ಪೆಕ್ಟರ್ ಎ.ಎಸ್. ಗುದಿಗೊಪ್ಪ, ಸುನೀಲ್ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಿಸಿಕೊಂಡ ಕೃಷಿ ಹೊಂಡದ ಸಹಾಯಧನದ ಬಿಲ್ ಮಂಜೂರಾತಿಗೆ ಬುಧವಾರ ಲಂಚ ಪಡೆಯುತ್ತಿದ್ದ ಅಥಣಿ ತಾಲ್ಲೂಕು ಪಂಚಾಯಿತಿಯ ಎಂಜಿನಿಯರ್ ನಾಗಪ್ಪ ಭೀಮಪ್ಪ ಮೊಕಾಶಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಅಥಣಿ ತಾಲ್ಲೂಕಿನ ಅನಂತಪುರದ ಅಂಬರೀಷ ಸೋಮಲಿಂಗ ದುಗ್ಗಾಣಿ ನೀಡಿದ ದೂರಿನ ಮೇಲೆಗೆ ಎಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ‘₹ 6ಸಾವಿರ ಬೇಡಿಕೆ ಇಟ್ಟಿದ್ದ ನಾಗಪ್ಪ ಮುಂಗಡವಾಗಿ ₹ 3ಸಾವಿರ ಪಡೆದಿದ್ದರು. ಉಳಿದ ₹ 3ಸಾವಿರ ಪಡೆಯುವಾಗ ಅವರು ಸಿಕ್ಕಿಬಿದ್ದಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ. ಲಂಚವಾಗಿ ಪಡೆದ ಹಣವನ್ನು ಅವರಿಂದ ವಸೂಲಿ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದು ಎಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಡಿಎಸ್ಪಿ ಶರಣಪ್ಪ ಹಾಗೂ ಇನ್ಸ್ಪೆಕ್ಟರ್ ಎ.ಎಸ್. ಗುದಿಗೊಪ್ಪ, ಸುನೀಲ್ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>