ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸಿಬಿ ಕಾರ್ಯಾಚರಣೆ; ಬೆಳಗಾವಿಯಲ್ಲಿ ಮುಜರಾಯಿ ಇಲಾಖೆ ತಹಶೀಲ್ದಾರ್ ಬಂಧನ

Last Updated 22 ಜನವರಿ 2022, 8:57 IST
ಅಕ್ಷರ ಗಾತ್ರ

ಬೆಳಗಾವಿ: ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಮಂಜೂರಾಗಿದ್ದ ಅನುದಾನ ಬಿಡುಗಡೆಗಾಗಿ ಶೇ.5ರಷ್ಟು ಲಂಚ ಕೇಳಿದ್ದ ಬೆಳಗಾವಿಯ ಮುಜರಾಯಿ ಇಲಾಖೆ ತಹಶೀಲ್ದಾರ್ ಮತ್ತು‌ಅವರ ಸಂಬಂಧಿಯನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.

ಮುಜರಾಯಿ ತಹಶೀಲ್ದಾರ್ ದಶರಥ ನಕುಲ ಜಾಧವ ಹಾಗೂ ಅವರ ಸಂಬಂಧಿ ಸಂತೋಷ ಕಡೋಲಕರ ಬಂಧಿತ ಆರೋಪಿಗಳು.

ಜಿಲ್ಲೆಯ ರಾಮದುರ್ಗದಲ್ಲಿನ ಯಕಲಮ್ಮ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಮುಜರಾಯಿ ಇಲಾಖೆಯ ಆರಾಧನಾ ಯೋಜನೆಯಲ್ಲಿ ₹ 4 ಲಕ್ಷ ಮಂಜೂರಾಗಿತ್ತು. ಅನುದಾನ ಬಿಡುಗಡೆಗಾಗಿ ದಶರಥ ಜಾಥವ ಅವರು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವಿಚಾರವಾಗಿ ದೇವಸ್ಥಾನದ ಸುಭಾಷ ಗೋಡಕೆ ಎನ್ನುವವರು ಎಸಿಬಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು ತಹಶೀಲ್ದಾರ್ ಪರವಾಗಿ ಲಂಚ ಪಡೆಯುತ್ತಿದ್ದ ಅವರ ಸಂಬಂಧಿಯನ್ನು ಬಂಧಿಸಿದ್ದಾರೆ. ಬಳಿಕ ಇದೇ ಪ್ರಕರಣದಲ್ಲಿ ತಹಶೀಲ್ದಾರ್ ಜಾಧವ್ ಅವರನ್ನೂ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಸಿಬಿ ಎಸ್ಪಿ ಬಿ. ಎಸ್. ನೇಮಗೌಡ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನೀಲಕುಮಾರ ಮತ್ತು ಸಿಬ್ಬಂದಿ ದಾಳಿ‌ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT