ಜಿಲ್ಲೆಯ ರಾಮದುರ್ಗದಲ್ಲಿನ ಯಕಲಮ್ಮ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಮುಜರಾಯಿ ಇಲಾಖೆಯ ಆರಾಧನಾ ಯೋಜನೆಯಲ್ಲಿ ₹ 4 ಲಕ್ಷ ಮಂಜೂರಾಗಿತ್ತು. ಅನುದಾನ ಬಿಡುಗಡೆಗಾಗಿ ದಶರಥ ಜಾಥವ ಅವರು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವಿಚಾರವಾಗಿ ದೇವಸ್ಥಾನದ ಸುಭಾಷ ಗೋಡಕೆ ಎನ್ನುವವರು ಎಸಿಬಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು ತಹಶೀಲ್ದಾರ್ ಪರವಾಗಿ ಲಂಚ ಪಡೆಯುತ್ತಿದ್ದ ಅವರ ಸಂಬಂಧಿಯನ್ನು ಬಂಧಿಸಿದ್ದಾರೆ. ಬಳಿಕ ಇದೇ ಪ್ರಕರಣದಲ್ಲಿ ತಹಶೀಲ್ದಾರ್ ಜಾಧವ್ ಅವರನ್ನೂ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.