<p><strong>ಎಂ.ಕೆ.ಹುಬ್ಬಳ್ಳಿ: </strong>ಇಲ್ಲಿನ ರಾಷ್ಟ್ರೀಯ ಹೆದ್ದಾರಿ-4ರ ಮಲಪ್ರಭಾ ನದಿ ಸೇತುವೆ ಬಳಿ ಹೆದ್ದಾರಿ ಪಕ್ಕದ ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ.</p>.<p>ಹುಬ್ಬಳ್ಳಿ ನಗರದ ವೀರಾಪುರ ಓಣಿಯ ನಿವಾಸಿ ರುದ್ರಯ್ಯ ಶಿದ್ದಲಿಂಗಯ್ಯ ದಂಡಾವತಿಮಠ (28) ಮೃತ ವ್ಯಕ್ತಿ. ಬೈಕ್ ಚಲಾಯಿಸುತ್ತಿದ್ದ ಅದೇ ನಗರದ ಪ್ರಶಾಂತ ಮನೋಹರ ತಾಳಿಕೋಟಿ (35) ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿ ಆಸ್ಫತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.</p>.<p>ಹುಬ್ಬಳ್ಳಿಯಿಂದ ಬೆಳಗಾವಿಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲಿಸಿದ್ದಾರೆ.</p>
<p><strong>ಎಂ.ಕೆ.ಹುಬ್ಬಳ್ಳಿ: </strong>ಇಲ್ಲಿನ ರಾಷ್ಟ್ರೀಯ ಹೆದ್ದಾರಿ-4ರ ಮಲಪ್ರಭಾ ನದಿ ಸೇತುವೆ ಬಳಿ ಹೆದ್ದಾರಿ ಪಕ್ಕದ ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ.</p>.<p>ಹುಬ್ಬಳ್ಳಿ ನಗರದ ವೀರಾಪುರ ಓಣಿಯ ನಿವಾಸಿ ರುದ್ರಯ್ಯ ಶಿದ್ದಲಿಂಗಯ್ಯ ದಂಡಾವತಿಮಠ (28) ಮೃತ ವ್ಯಕ್ತಿ. ಬೈಕ್ ಚಲಾಯಿಸುತ್ತಿದ್ದ ಅದೇ ನಗರದ ಪ್ರಶಾಂತ ಮನೋಹರ ತಾಳಿಕೋಟಿ (35) ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿ ಆಸ್ಫತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.</p>.<p>ಹುಬ್ಬಳ್ಳಿಯಿಂದ ಬೆಳಗಾವಿಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲಿಸಿದ್ದಾರೆ.</p>