<p><strong>ಗೋಕಾಕ: </strong>‘ತಾಲ್ಲೂಕಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡುತ್ತಿದ್ದು, ಇಡೀ ರಾಜ್ಯದ ಜನತೆ ಗೋಕಾವಿ ನಾಡಿನತ್ತ ತಲೆ ಎತ್ತಿ ನೋಡುವಂತಾಗಿದೆ’ ಎಂದು ಇಲ್ಲಿನ ಬಿಇಒ ಜಿ.ಬಿ. ಬಳಗಾರ ಹೇಳಿದರು.</p>.<p>ಇಲ್ಲಿನ ಲಕ್ಷ್ಮೀದೇವಿ ದೇವಸ್ಥಾನ ಆವರಣದಲ್ಲಿ ಗುರುವಾರ ಪೇಟೆಯ ನಾಗರಿಕರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ,ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದ ಶೂನ್ಯ ಸಂಪಾದನ ಮಠದ ಸಿದ್ಧಲಿಂಗೇಶ್ವರ ಬಿಸಿಎ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿ ವೈಷ್ಣವಿ ತಳ್ಳಿ ಅವರನ್ನು ಸತ್ಕರಿಸಿ ಅವರು ಮಾತನಾಡಿದರು.</p>.<p>‘ಶಾಸಕ ರಮೇಶ ಜಾರಕಿಹೊಳಿ ಅವರು ಕ್ಷೇತ್ರದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದಾರೆ. ಇವುಗಳನ್ನು ಮಕ್ಕಳು ಸದ್ಬಳಕೆ ಮಾಡಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಸಾನ್ನಿಧ್ಯ ವಹಿಸಿದ್ದ ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಮುರುಘರಾಜೇಂದ್ರ ಸ್ವಾಮೀಜಿ, ‘ಉತ್ತಮ ಜೀವನಕ್ಕೆ ವಿದ್ಯೆ ಅತ್ಯವಶ್ಯವಾಗಿದೆ. ಪಾಲಕರು ಶಿಕ್ಷಣಕ್ಕೆ ಮಹತ್ವ ಕೊಡಬೇಕು’ ಎಂದು ಸಲಹೆ ನೀಡಿದರು.</p>.<p>ಗುರುವಾರ ಪೇಟೆಯ ನಾಗರಿಕರು, ಸಂಗೊಳ್ಳಿ ರಾಯಣ್ಣ ಸಂಘ, ಕುಂಬಾರ ಸಮಾಜ, ಚಿತ್ರಗಾರ ಸಮಾಜ ಹಾಗೂ ಬಸಳಗುಂದಿ ಗ್ರಾಮಸ್ಥರು ವಿದ್ಯಾರ್ಥಿನಿಯನ್ನು ಸತ್ಕರಿಸಿದರು.</p>.<p>ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ, ನಗರಸಭಾಧ್ಯಕ್ಷ ಜಯಾನಂದ ಹುಣಚ್ಯಾಳಿ, ಮೂಡಲಗಿ ಬಿಇಒ ಅಜಿತ ಮನ್ನಿಕೇರಿ, ನಗರಸಭೆ ಪ್ರಭಾರ ಪೌರಾಯುಕ್ತ ಶಿವಾನಂದ ಹಿರೇಮಠ, ಶಹರ ಠಾಣೆಯ ಎಸ್.ಐ. ಕೆ.ವಾಲಿಕರ, ಹೆಸ್ಕಾಂ ಇಒ ಎಸ್.ಪಿ. ವರಾಳೆ, ನಿವೃತ್ತ ಶಿಕ್ಷಕ ವಿಠಲ ಹಟ್ಟಿ ಇದ್ದರು.</p>.<p>ಶಿಕ್ಷಕ ರಾಮಚಂದ್ರ ಕಾಕಡೆ ಸ್ವಾಗತಿಸಿದರು. ಲಕ್ಷ್ಮಣ ಮಲ್ಲಾಪೂರೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ: </strong>‘ತಾಲ್ಲೂಕಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡುತ್ತಿದ್ದು, ಇಡೀ ರಾಜ್ಯದ ಜನತೆ ಗೋಕಾವಿ ನಾಡಿನತ್ತ ತಲೆ ಎತ್ತಿ ನೋಡುವಂತಾಗಿದೆ’ ಎಂದು ಇಲ್ಲಿನ ಬಿಇಒ ಜಿ.ಬಿ. ಬಳಗಾರ ಹೇಳಿದರು.</p>.<p>ಇಲ್ಲಿನ ಲಕ್ಷ್ಮೀದೇವಿ ದೇವಸ್ಥಾನ ಆವರಣದಲ್ಲಿ ಗುರುವಾರ ಪೇಟೆಯ ನಾಗರಿಕರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ,ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದ ಶೂನ್ಯ ಸಂಪಾದನ ಮಠದ ಸಿದ್ಧಲಿಂಗೇಶ್ವರ ಬಿಸಿಎ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿ ವೈಷ್ಣವಿ ತಳ್ಳಿ ಅವರನ್ನು ಸತ್ಕರಿಸಿ ಅವರು ಮಾತನಾಡಿದರು.</p>.<p>‘ಶಾಸಕ ರಮೇಶ ಜಾರಕಿಹೊಳಿ ಅವರು ಕ್ಷೇತ್ರದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದಾರೆ. ಇವುಗಳನ್ನು ಮಕ್ಕಳು ಸದ್ಬಳಕೆ ಮಾಡಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಸಾನ್ನಿಧ್ಯ ವಹಿಸಿದ್ದ ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಮುರುಘರಾಜೇಂದ್ರ ಸ್ವಾಮೀಜಿ, ‘ಉತ್ತಮ ಜೀವನಕ್ಕೆ ವಿದ್ಯೆ ಅತ್ಯವಶ್ಯವಾಗಿದೆ. ಪಾಲಕರು ಶಿಕ್ಷಣಕ್ಕೆ ಮಹತ್ವ ಕೊಡಬೇಕು’ ಎಂದು ಸಲಹೆ ನೀಡಿದರು.</p>.<p>ಗುರುವಾರ ಪೇಟೆಯ ನಾಗರಿಕರು, ಸಂಗೊಳ್ಳಿ ರಾಯಣ್ಣ ಸಂಘ, ಕುಂಬಾರ ಸಮಾಜ, ಚಿತ್ರಗಾರ ಸಮಾಜ ಹಾಗೂ ಬಸಳಗುಂದಿ ಗ್ರಾಮಸ್ಥರು ವಿದ್ಯಾರ್ಥಿನಿಯನ್ನು ಸತ್ಕರಿಸಿದರು.</p>.<p>ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ, ನಗರಸಭಾಧ್ಯಕ್ಷ ಜಯಾನಂದ ಹುಣಚ್ಯಾಳಿ, ಮೂಡಲಗಿ ಬಿಇಒ ಅಜಿತ ಮನ್ನಿಕೇರಿ, ನಗರಸಭೆ ಪ್ರಭಾರ ಪೌರಾಯುಕ್ತ ಶಿವಾನಂದ ಹಿರೇಮಠ, ಶಹರ ಠಾಣೆಯ ಎಸ್.ಐ. ಕೆ.ವಾಲಿಕರ, ಹೆಸ್ಕಾಂ ಇಒ ಎಸ್.ಪಿ. ವರಾಳೆ, ನಿವೃತ್ತ ಶಿಕ್ಷಕ ವಿಠಲ ಹಟ್ಟಿ ಇದ್ದರು.</p>.<p>ಶಿಕ್ಷಕ ರಾಮಚಂದ್ರ ಕಾಕಡೆ ಸ್ವಾಗತಿಸಿದರು. ಲಕ್ಷ್ಮಣ ಮಲ್ಲಾಪೂರೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>