<p><strong>ಬೆಳಗಾವಿ:</strong> ‘ಜಿಲ್ಲೆಯಲ್ಲಿ 2020–21ನೇ ಸಾಲಿನ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.</p>.<p>ಇಲ್ಲಿ ಗುರುವಾರ ನಡೆದ ಹಿಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಅನುಷ್ಠಾನದ ಜಿಲ್ಲಾ ಮಟ್ಟದ ಉಸ್ತುವಾರಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಪ್ರಕೃತಿ ವಿಕೋಪ ಹಾಗೂ ಕೀಟ ಅಥವಾ ರೋಗ ಬಾಧೆಗಳಿಂದ ಅಧಿಸೂಚಿತ ಬೆಳೆಗಳಿಗೆ ವಿಮಾ ರಕ್ಷಣೆ ಒದಗಿಸುವುದು ಯೋಜನೆಯ ಮುಖ್ಯ ಉದ್ದೇಶ. ತಾಲ್ಲೂಕಿನ ಪ್ರಮುಖ ಬೆಳೆಗಳನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅಧಿಸೂಚಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಹೊಸ ಮಾರ್ಗಸೂಚಿ ಅನ್ವಯ ಪ್ರಸಕ್ತ ಸಾಲಿನಿಂದ ವಿಮೆ ಆಯ್ಕೆ ಐಚ್ಛಿಕವಾಗಿದೆ. ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಬಯಸದಿದ್ದಲ್ಲಿ ಸಂಬಂಧಿಸಿದ ಬ್ಯಾಂಕ್ನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ನಿಗದಿತ ನಮೂನೆಯಲ್ಲಿ ಮುಚ್ಚಳಿಕೆ ಪತ್ರವನ್ನು ನೀಡಬೇಕು. ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು’ ಎಂದು ತಿಳಿಸಿದರು.</p>.<p>‘ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಪಾಲ್ಗೊಳ್ಳಲು ಕಡ್ಡಾಯವಾಗಿ ನಿಗದಿತ ನಮೂನೆಯಲ್ಲಿ ಮುಚ್ಚಳಿಕೆ ಪತ್ರವನ್ನು ಬ್ಯಾಂಕ್ ವ್ಯವಸ್ಥಾಪಕರಿಗೆ ನೀಡಬೇಕು. ರೈತರು ತಮ್ಮ ವ್ಯಾಪ್ತಿಯಲ್ಲಿ ಬರುವ ಬ್ಯಾಂಕ್, ಸಹಕಾರಿ ಸಂಘ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮೆ ಕಂತನ್ನು ಪಾವತಿಸಿ ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ ಸಾಮಾನ್ಯ ಸೇವಾ ಕೇಂದ್ರಗಳ ಜಿಲ್ಲಾ ಪ್ರತಿನಿಧಿಗಳನ್ನು ಮೊ:9449976218, 9008593066 ಸಂಪರ್ಕಿಸಬಹುದಾಗಿದೆ’ ಎಂದರು.</p>.<p>‘ಯೋಜನೆಯಲ್ಲಿ ಪಾಲ್ಗೊಳ್ಳಲು ಹುರುಳಿ (ಮಳೆ ಆಶ್ರಿತ) ಬೆಳೆಗೆ ನ.17, ಮುಸುಕಿನ ಜೋಳ (ನೀರಾವರಿ) ಮತ್ತು ಗೋಧಿ (ನೀರಾವರಿ) ಬೆಳೆಗಳಿಗೆ ಡಿ.16 ಹಾಗೂ ಉಳಿದೆಲ್ಲಾ ಅಧಿಸೂಚಿತ ಬೆಳೆಗಳಿಗೆ ನ. 30 ಕೊನೆಯ ದಿನಾಂಕವಾಗಿದೆ’ ಎಂದು ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಜಿಲ್ಲೆಯಲ್ಲಿ 2020–21ನೇ ಸಾಲಿನ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.</p>.<p>ಇಲ್ಲಿ ಗುರುವಾರ ನಡೆದ ಹಿಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಅನುಷ್ಠಾನದ ಜಿಲ್ಲಾ ಮಟ್ಟದ ಉಸ್ತುವಾರಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಪ್ರಕೃತಿ ವಿಕೋಪ ಹಾಗೂ ಕೀಟ ಅಥವಾ ರೋಗ ಬಾಧೆಗಳಿಂದ ಅಧಿಸೂಚಿತ ಬೆಳೆಗಳಿಗೆ ವಿಮಾ ರಕ್ಷಣೆ ಒದಗಿಸುವುದು ಯೋಜನೆಯ ಮುಖ್ಯ ಉದ್ದೇಶ. ತಾಲ್ಲೂಕಿನ ಪ್ರಮುಖ ಬೆಳೆಗಳನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅಧಿಸೂಚಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಹೊಸ ಮಾರ್ಗಸೂಚಿ ಅನ್ವಯ ಪ್ರಸಕ್ತ ಸಾಲಿನಿಂದ ವಿಮೆ ಆಯ್ಕೆ ಐಚ್ಛಿಕವಾಗಿದೆ. ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಬಯಸದಿದ್ದಲ್ಲಿ ಸಂಬಂಧಿಸಿದ ಬ್ಯಾಂಕ್ನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ನಿಗದಿತ ನಮೂನೆಯಲ್ಲಿ ಮುಚ್ಚಳಿಕೆ ಪತ್ರವನ್ನು ನೀಡಬೇಕು. ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು’ ಎಂದು ತಿಳಿಸಿದರು.</p>.<p>‘ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಪಾಲ್ಗೊಳ್ಳಲು ಕಡ್ಡಾಯವಾಗಿ ನಿಗದಿತ ನಮೂನೆಯಲ್ಲಿ ಮುಚ್ಚಳಿಕೆ ಪತ್ರವನ್ನು ಬ್ಯಾಂಕ್ ವ್ಯವಸ್ಥಾಪಕರಿಗೆ ನೀಡಬೇಕು. ರೈತರು ತಮ್ಮ ವ್ಯಾಪ್ತಿಯಲ್ಲಿ ಬರುವ ಬ್ಯಾಂಕ್, ಸಹಕಾರಿ ಸಂಘ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮೆ ಕಂತನ್ನು ಪಾವತಿಸಿ ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ ಸಾಮಾನ್ಯ ಸೇವಾ ಕೇಂದ್ರಗಳ ಜಿಲ್ಲಾ ಪ್ರತಿನಿಧಿಗಳನ್ನು ಮೊ:9449976218, 9008593066 ಸಂಪರ್ಕಿಸಬಹುದಾಗಿದೆ’ ಎಂದರು.</p>.<p>‘ಯೋಜನೆಯಲ್ಲಿ ಪಾಲ್ಗೊಳ್ಳಲು ಹುರುಳಿ (ಮಳೆ ಆಶ್ರಿತ) ಬೆಳೆಗೆ ನ.17, ಮುಸುಕಿನ ಜೋಳ (ನೀರಾವರಿ) ಮತ್ತು ಗೋಧಿ (ನೀರಾವರಿ) ಬೆಳೆಗಳಿಗೆ ಡಿ.16 ಹಾಗೂ ಉಳಿದೆಲ್ಲಾ ಅಧಿಸೂಚಿತ ಬೆಳೆಗಳಿಗೆ ನ. 30 ಕೊನೆಯ ದಿನಾಂಕವಾಗಿದೆ’ ಎಂದು ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>