<p><strong>ಬೆಳಗಾವಿ</strong>: ‘ಸರ್ಕಾರದ ಆದೇಶದಂತೆ ವಿವಿಧ ಇಲಾಖೆ ಹಾಗೂ ನಿಗಮಗಳ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಲು ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳುವ ಜೊತೆಗೆ ಮೂಲಸೌಕರ್ಯವನ್ನೂ ಒದಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.</p>.<p>ಇಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಸುವರ್ಣ ವಿಧಾನಸೌಧ ಉತ್ತರ ಕರ್ನಾಟಕದ ಹೆಮ್ಮೆಯ ಪ್ರತೀಕ. ಅಧಿವೇಶನ ಹೊರತುಪಡಿಸಿ ಅದು ಬಳಕೆ ಆಗುತ್ತಿರಲಿಲ್ಲ. ಆದರೆ, ಸರ್ಕಾರ ಬಾಡಿಗೆ ಕಟ್ಟಡದಲ್ಲಿರುವ ಕಚೇರಿಗಳನ್ನು ಸ್ಥಳಾಂತರಿಸಲು ಆದೇಶಿಸಿದೆ. ಕಚೇರಿಗಳಿಗೆ ಬೇಕಾಗುವ ಎಲ್ಲಾ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಕಲ್ಪಿಸಲಾಗುವುದು’ ಎಂದು ಹೇಳಿದರು.</p>.<p>‘ಸಾರಿಗೆ ಸಂಸ್ಥೆಯು ಸಮಯಕ್ಕೆ ಅನುಗುಣವಾಗಿ ಬಸ್ಗಳ ವ್ಯವಸ್ಥೆ ಮಾಡಬೇಕು. ಸ್ಥಳಾಂತರದ ಬಳಿಕ ಎಲ್ಲರೂ ವಾತಾವರಣಕ್ಕೆ ಹೊಂದಿಕೊಂಡು ಕೆಲಸ ನಿರ್ವಹಿಸಬೇಕು. ಕುರ್ಚಿ ಮತ್ತು ಟೇಬಲ್ಗಳ ಖರೀದಿಗೆ ಅವಕಾಶವಿಲ್ಲ. ಈಗಿರುವ ವಸ್ತುಗಳನ್ನು ಬಳಸಿಕೊಳ್ಳಬೇಕು. ಲೋಕೋಪಯೋಗಿ ಇಲಾಖೆಯವರು ಸುಸಜ್ಜಿತ ಕ್ಯಾಂಟಿನ್ ವ್ಯವಸ್ಥೆ ಮಾಡಿಕೊಡಬೇಕು’ ಎಂದು ಸೂಚಿಸಿದರು.</p>.<p>‘ಸಿಬ್ಬಂದಿಗೆ ಹೆಲ್ತ್ ಕೇರ್ ಸೆಂಟರ್ ಸ್ಥಾಪಿಸಲಾಗುವುದು. ಈಗಾಗಲೇ ಅಲ್ಲಿ ಅಂಚೆ ಕಚೇರಿ ಇದೆ. ಬ್ಯಾಂಕ್ ಹಾಗೂ ಎಟಿಎಂ ವ್ಯವಸ್ಥೆ ಕೂಡ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ‘ಕಚೇರಿಗಳನ್ನು ನೀಡಿದ ಬಳಿಕ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಇಲ್ಲದಿದ್ದರೆ ಸಂಬಂಧಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಸರ್ಕಾರದ ಆದೇಶದಂತೆ ವಿವಿಧ ಇಲಾಖೆ ಹಾಗೂ ನಿಗಮಗಳ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಲು ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳುವ ಜೊತೆಗೆ ಮೂಲಸೌಕರ್ಯವನ್ನೂ ಒದಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.</p>.<p>ಇಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಸುವರ್ಣ ವಿಧಾನಸೌಧ ಉತ್ತರ ಕರ್ನಾಟಕದ ಹೆಮ್ಮೆಯ ಪ್ರತೀಕ. ಅಧಿವೇಶನ ಹೊರತುಪಡಿಸಿ ಅದು ಬಳಕೆ ಆಗುತ್ತಿರಲಿಲ್ಲ. ಆದರೆ, ಸರ್ಕಾರ ಬಾಡಿಗೆ ಕಟ್ಟಡದಲ್ಲಿರುವ ಕಚೇರಿಗಳನ್ನು ಸ್ಥಳಾಂತರಿಸಲು ಆದೇಶಿಸಿದೆ. ಕಚೇರಿಗಳಿಗೆ ಬೇಕಾಗುವ ಎಲ್ಲಾ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಕಲ್ಪಿಸಲಾಗುವುದು’ ಎಂದು ಹೇಳಿದರು.</p>.<p>‘ಸಾರಿಗೆ ಸಂಸ್ಥೆಯು ಸಮಯಕ್ಕೆ ಅನುಗುಣವಾಗಿ ಬಸ್ಗಳ ವ್ಯವಸ್ಥೆ ಮಾಡಬೇಕು. ಸ್ಥಳಾಂತರದ ಬಳಿಕ ಎಲ್ಲರೂ ವಾತಾವರಣಕ್ಕೆ ಹೊಂದಿಕೊಂಡು ಕೆಲಸ ನಿರ್ವಹಿಸಬೇಕು. ಕುರ್ಚಿ ಮತ್ತು ಟೇಬಲ್ಗಳ ಖರೀದಿಗೆ ಅವಕಾಶವಿಲ್ಲ. ಈಗಿರುವ ವಸ್ತುಗಳನ್ನು ಬಳಸಿಕೊಳ್ಳಬೇಕು. ಲೋಕೋಪಯೋಗಿ ಇಲಾಖೆಯವರು ಸುಸಜ್ಜಿತ ಕ್ಯಾಂಟಿನ್ ವ್ಯವಸ್ಥೆ ಮಾಡಿಕೊಡಬೇಕು’ ಎಂದು ಸೂಚಿಸಿದರು.</p>.<p>‘ಸಿಬ್ಬಂದಿಗೆ ಹೆಲ್ತ್ ಕೇರ್ ಸೆಂಟರ್ ಸ್ಥಾಪಿಸಲಾಗುವುದು. ಈಗಾಗಲೇ ಅಲ್ಲಿ ಅಂಚೆ ಕಚೇರಿ ಇದೆ. ಬ್ಯಾಂಕ್ ಹಾಗೂ ಎಟಿಎಂ ವ್ಯವಸ್ಥೆ ಕೂಡ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ‘ಕಚೇರಿಗಳನ್ನು ನೀಡಿದ ಬಳಿಕ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಇಲ್ಲದಿದ್ದರೆ ಸಂಬಂಧಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>