<p><strong>ಹುಕ್ಕೇರಿ: ‘</strong>ಶೈಕ್ಷಣಿಕ ಜೀವನದ ಆರಂಭಿಕ ಹಂತಕ್ಕೆ ಭದ್ರ ಬುನಾದಿ ಹಾಕಲು ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ಆರಂಭಿಸಿದ್ದು, ಈ ಯೋಜನೆಯಡಿ ಆಯ್ಕೆಯಾದ ಶಾಲೆಗಳಲ್ಲಿ ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಸಲು ಕ್ರಮ ವಹಿಸಲಾಗಿದೆ’ ಎಂದು ಶಾಸಕ ನಿಖಿಲ್ ಕತ್ತಿ ಹೇಳಿದರು.</p>.<p>ತಾಲ್ಲೂಕಿನ ಸಾರಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಿಸಿರುವ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗೆ ಬುಧವಾರ ಚಾಲನೆ ಹಾಗೂ ಅಡುಗೆ ಕೊಠಡಿ ಉದ್ಘಾಟಿಸಿ ಮಾತನಾಡಿದರು.</p>.<p>‘ತಾಲ್ಲೂಕಿನ ಸಾರಾಪುರ, ಹುನೂರ-ಮಾಸ್ತಿಹೊಳಿ, ಪಾಶ್ಚಾಪುರ ಮತ್ತು ಝಂಗಟಿಹಾಳ ಗ್ರಾಮಗಳಲ್ಲಿ ಈಗಾಗಲೇ ಆರಂಭಿಸಲಾಗಿದೆ. ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಈ ಯೋಜನೆ ಅನುಷ್ಠಾನಗೊಳಿಸಬೇಕು’ ಎಂದು ಶಿಕ್ಷಕರಿಗೆ ಹೇಳಿದರು.</p>.<p>ತಹಶೀಲ್ದಾರ್ ಮಂಜುಳಾ ನಾಯಕ ಮಾತನಾಡಿದರು. ಎಸ್ಎಇಎಂಸಿ ಅಧ್ಯಕ್ಷ ಶಾಂತಿನಾಥ ಹೆಬ್ಬಾಳ ಅಧ್ಯಕ್ಷತೆ ವಹಿಸಿದ್ದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಸಯ್ಯದ ಅಮ್ಮಣಗಿ, ಸದಸ್ಯರಾದ ಸತ್ಯಪ್ಪ ಹಾಲಟ್ಟಿ, ಪುಟ್ಟು ಚೌಗಲಾ, ಬಸವರಾಜ ಮಾಲದಿನ್ನಿ, ಮಾಲವ್ವ ಮಾದರ, ಪಿಡಿಒ ಮಹಾದೇವ ಜಿನರಾಳೆ, ಬಿಇಒ ಪ್ರಭಾವತಿ ಪಾಟೀಲ, ಬಿಆರ್ಸಿ ಎ.ಎಸ್.ಪದ್ಮನ್ನವರ ಸೇರಿದಂತೆ ಅನೇಕರು ಇದ್ದರು.</p>.<p>ಇದೆ ವೇಳೆ ಶಾಸಕರು ಕಾರ್ಮಿಕರಿಗೆ ಕಿಟ್ ವಿತರಿಸಿದರು. ಶಾಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನದಡಿ ವಿವಿಧ ಧಾನ್ಯ-ತರಕಾರಿಗಳಿಂದ ತಯಾರಿಸಿದ ವಿವಿಧ ಆಕೃತಿಗಳು ಗಮನ ಸೆಳೆದವು.</p>.<p>ಮುಖ್ಯ ಶಿಕ್ಷಕ ಐ.ಎಂ.ಲಟ್ಟಿ ಸ್ವಾಗತಿಸಿದರು. ಶಿಕ್ಷಕಿ ಕೆ.ಕೆ.ಮೊಖಾಶಿ ನಿರೂಪಿಸಿದರು. ಶಿಕ್ಷಕ ಆರ್.ಎ.ಕುಲಕರ್ಣಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ: ‘</strong>ಶೈಕ್ಷಣಿಕ ಜೀವನದ ಆರಂಭಿಕ ಹಂತಕ್ಕೆ ಭದ್ರ ಬುನಾದಿ ಹಾಕಲು ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ಆರಂಭಿಸಿದ್ದು, ಈ ಯೋಜನೆಯಡಿ ಆಯ್ಕೆಯಾದ ಶಾಲೆಗಳಲ್ಲಿ ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಸಲು ಕ್ರಮ ವಹಿಸಲಾಗಿದೆ’ ಎಂದು ಶಾಸಕ ನಿಖಿಲ್ ಕತ್ತಿ ಹೇಳಿದರು.</p>.<p>ತಾಲ್ಲೂಕಿನ ಸಾರಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಿಸಿರುವ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗೆ ಬುಧವಾರ ಚಾಲನೆ ಹಾಗೂ ಅಡುಗೆ ಕೊಠಡಿ ಉದ್ಘಾಟಿಸಿ ಮಾತನಾಡಿದರು.</p>.<p>‘ತಾಲ್ಲೂಕಿನ ಸಾರಾಪುರ, ಹುನೂರ-ಮಾಸ್ತಿಹೊಳಿ, ಪಾಶ್ಚಾಪುರ ಮತ್ತು ಝಂಗಟಿಹಾಳ ಗ್ರಾಮಗಳಲ್ಲಿ ಈಗಾಗಲೇ ಆರಂಭಿಸಲಾಗಿದೆ. ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಈ ಯೋಜನೆ ಅನುಷ್ಠಾನಗೊಳಿಸಬೇಕು’ ಎಂದು ಶಿಕ್ಷಕರಿಗೆ ಹೇಳಿದರು.</p>.<p>ತಹಶೀಲ್ದಾರ್ ಮಂಜುಳಾ ನಾಯಕ ಮಾತನಾಡಿದರು. ಎಸ್ಎಇಎಂಸಿ ಅಧ್ಯಕ್ಷ ಶಾಂತಿನಾಥ ಹೆಬ್ಬಾಳ ಅಧ್ಯಕ್ಷತೆ ವಹಿಸಿದ್ದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಸಯ್ಯದ ಅಮ್ಮಣಗಿ, ಸದಸ್ಯರಾದ ಸತ್ಯಪ್ಪ ಹಾಲಟ್ಟಿ, ಪುಟ್ಟು ಚೌಗಲಾ, ಬಸವರಾಜ ಮಾಲದಿನ್ನಿ, ಮಾಲವ್ವ ಮಾದರ, ಪಿಡಿಒ ಮಹಾದೇವ ಜಿನರಾಳೆ, ಬಿಇಒ ಪ್ರಭಾವತಿ ಪಾಟೀಲ, ಬಿಆರ್ಸಿ ಎ.ಎಸ್.ಪದ್ಮನ್ನವರ ಸೇರಿದಂತೆ ಅನೇಕರು ಇದ್ದರು.</p>.<p>ಇದೆ ವೇಳೆ ಶಾಸಕರು ಕಾರ್ಮಿಕರಿಗೆ ಕಿಟ್ ವಿತರಿಸಿದರು. ಶಾಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನದಡಿ ವಿವಿಧ ಧಾನ್ಯ-ತರಕಾರಿಗಳಿಂದ ತಯಾರಿಸಿದ ವಿವಿಧ ಆಕೃತಿಗಳು ಗಮನ ಸೆಳೆದವು.</p>.<p>ಮುಖ್ಯ ಶಿಕ್ಷಕ ಐ.ಎಂ.ಲಟ್ಟಿ ಸ್ವಾಗತಿಸಿದರು. ಶಿಕ್ಷಕಿ ಕೆ.ಕೆ.ಮೊಖಾಶಿ ನಿರೂಪಿಸಿದರು. ಶಿಕ್ಷಕ ಆರ್.ಎ.ಕುಲಕರ್ಣಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>