‘ಅವರನ್ನು ಕಳೆದುಕೊಂಡ ಕುಟುಂಬ ತೊಂದರೆಗೆ ಸಿಲುಕಬಾರದೆಂಬ ದೃಷ್ಟಿಯಿಂದ, ಬಿಎ ಪದವೀಧರೆಯಾದ ಪತ್ನಿ ಜಯಶ್ರೀ ಪಾಟೀಲ ಅವರಿಗೆ ಸರ್ಕಾರಿ ನೌಕರಿ ಕೊಡಬೇಕು ಮತ್ತು ಸಂತೋಷ್ ಮಾಡಿದ್ದ ಕೆಲಸಗಳನ್ನು ಅಧಿಕಾರಿಗಳಿಂದ ತನಿಖೆ ಮಾಡಿಸಿ, ಕ್ರಮಬದ್ಧಗೊಳಿಸಿ ₹ 4 ಕೋಟಿ ಬಿಲ್ ಕೊಡಿಸಲಾಗುವುದು’ ಎಂದು ಭರವಸೆ ನೀಡಿದರು. ‘ಈ ಕುರಿತ ನನ್ನ ಮನವಿಗೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ಹೇಳಿದರು.