‘ರಾಜ್ಯ ಸರ್ಕಾರದ ಕರ್ನಾಟಕ ನಗರ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿ ಇಲಾಖೆಯಿಂದ ಅನುಷ್ಠಾನಗೊಳ್ಳಲಿರುವ ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ಶೇ 50, ರಾಜ್ಯ ಸರ್ಕಾರದಿಂದ ಶೇ 40 ಹಾಗೂ ಸ್ಥಳೀಯ ನಗರಸಭೆಯಿಂದ ಶೇ 10 ರಷ್ಟು ಅನುದಾನ ದೊರೆಯಲಿದೆ. ವೇದಗಂಗಾ ನದಿಯ ದಡದಲ್ಲಿ 12 ಮೀ. ಸುತ್ತಳತೆಯ ಆರ್ಸಿಸಿ ಜಾಕವೆಲ್ ಕಮ್ ಪಂಪಹೌಸ್ ನಿರ್ಮಾಣ, 8x8 ಮೀಟರ್ ಟಿಸಿ ಪ್ಲಾಟ್ಫಾರ್ಮ್, 5 ಮೀ. ಅಗಲ 30 ಮೀ. ಉದ್ದದ ಕಾಲುಸೇತುವೆ ನಿರ್ಮಿಸಲಾಗುವುದು. ಈ ಜಾಕವೆಲ್ದಿಂದ ಜವಾಹರ ಜಲಾಶಯದವರೆಗೆ 7.7 ಕಿ.ಮೀ. ಉದ್ದದ ಪೈಪಲೈನ್ ನಿರ್ಮಾಣ ಮತ್ತು ಅಗೆದ ರಸ್ತೆ ಮರುನಿರ್ಮಾಣ ಕಾಮಗಾರಿ ಒಳಗೊಂಡಿದೆ. ಜತೆಗೆ ವಲಯ-1 ರಲ್ಲಿ 10 ಲಕ್ಷ ಲೀ. ಕ್ಷಮತೆಯ ಮೇಲ್ಮಟ್ಟದ ಜಲಸಂಗ್ರಹಾಲಯ (ಓಎಚ್ಟಿ) ಮತ್ತು ವಲಯ-2 ರಲ್ಲಿ ರಲ್ಲಿ 5 ಲಕ್ಷ ಲೀ. ಕ್ಷಮತೆಯ ಮೇಲ್ಮಟ್ಟದ ಜಲಸಂಗ್ರಹಾಲಯ (ಓಎಚ್ಟಿ)ಗಳನ್ನು ನಿರ್ಮಿಸಲಾಗುವುದು. ಮನೆಗೆ ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆಯಲ್ಲಿ ಯಾವುದೇ ಕೊರತೆಗಳಾಗದಂತೆ ಅನುಷ್ಠಾನಗೊಳಿಸಲಾಗುವುದು’ ಎಂದರು.