<p><strong>ಬೆಳಗಾವಿ:</strong> ಇಲ್ಲಿನ ಕೆಎಲ್ಇ ಸಂಸ್ಥೆಯ ಡಾ.ಎಂ.ಎಸ್. ಶೇಷಗಿರಿ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನಲ್ಲಿ ಪ್ರಾಧ್ಯಾಪಕರಿಗೆ ಚಟುವಟಿಕೆ ಆಧಾರಿತ ಕಲಿಕೆ ಕಾರ್ಯಾಗಾರ ಆಯೋಜಿಸಲಾಗಿತ್ತು.</p>.<p>ಉದ್ಘಾಟಿಸಿದ ವಿಟಿಯು ಕುಲಸಚಿವ (ಮೌಲ್ಯಮಾಪನ) ಡಾ.ಸತೀಶ ಅಣ್ಣಿಗೇರಿ, ‘ಕಳೆದ ಒಂದು ದಶಕದಿಂದ ಕಲಿಕೆಯ ವಿಧಾನಗಳಲ್ಲಿ ಬಹಳಷ್ಟು ಸುಧಾರಣೆಗಳಿವೆ. ಪ್ರಾಧ್ಯಾಪಕರು ಚಟುವಟಿಕೆ ಆಧಾರಿತ ಕಲಿಕಾ ವಿಧಾನಗಳನ್ನು ಅಳವಡಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ವಿಷಯಗಳು ಸುಲಭವಾಗಿ ಮನದಟ್ಟಾಗುತ್ತವೆ’ ಎಂದು ತಿಳಿಸಿದರು.</p>.<p>‘ಇಂದಿನ ವಿದ್ಯಾರ್ಥಿಗಳು ಮೊಬೈಲ್, ಇಂಟರ್ನೆಟ್ ಮೊದಲಾದ ವಿಷಯಗಳಲ್ಲಿ ಹೆಚ್ಚು ಆಸಕ್ತಿ ತೋರುತ್ತಿರುವುದರಿಂದ ಕಲಿಕೆಯಲ್ಲಿ ನಿರಾಸಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ. ಅವರು ಕಲಿಕೆಯಲ್ಲಿ ಆಸಕ್ತಿ ವಹಿಸಲು ಪ್ರಾಧ್ಯಾಪಕರು ಚಟುವಟಿಕೆ ಆಧಾರಿತ ಬೋಧನಾ ಕ್ರಮ ಅಳವಡಿಸಿಕೊಳ್ಳುವುದು ಇಂದಿನ ಅವಶ್ಯವಾಗಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಬಸವರಾಜ ಕಟಗೇರಿ, ‘ಚಟುವಟಿಕೆ ಆಧಾರಿತ ಕಲಿಕೆಯು ಜಗತ್ತಿನಲ್ಲಿಯೇ ಅತ್ಯುತ್ತಮ ಕಲಿಕಾ ವಿಧಾನವಾಗಿದೆ ಹಾಗೂ ವಿದ್ಯಾರ್ಥಿ ಕೇಂದ್ರೀಕೃತವಾಗಿದೆ. ವಿದ್ಯಾರ್ಥಿಗಳು ಇದನ್ನು ಅಳವಡಿಸಿಕೊಂಡು ಕಲಿಕಾ ಸಾಮರ್ಥ್ಯ ವೃದ್ಧಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಡಾ.ರಾಜಕುಮಾರ ರಾಯ್ಕರ ಸ್ವಾಗತಿಸಿದರು. ಡಾ.ಉಮೇಶ ದೇಶನ್ನವರ ಪರಿಚಯಿಸಿದರು. ಡಾ.ಮಹೇಶ ಕಾಮೋಜಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಇಲ್ಲಿನ ಕೆಎಲ್ಇ ಸಂಸ್ಥೆಯ ಡಾ.ಎಂ.ಎಸ್. ಶೇಷಗಿರಿ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನಲ್ಲಿ ಪ್ರಾಧ್ಯಾಪಕರಿಗೆ ಚಟುವಟಿಕೆ ಆಧಾರಿತ ಕಲಿಕೆ ಕಾರ್ಯಾಗಾರ ಆಯೋಜಿಸಲಾಗಿತ್ತು.</p>.<p>ಉದ್ಘಾಟಿಸಿದ ವಿಟಿಯು ಕುಲಸಚಿವ (ಮೌಲ್ಯಮಾಪನ) ಡಾ.ಸತೀಶ ಅಣ್ಣಿಗೇರಿ, ‘ಕಳೆದ ಒಂದು ದಶಕದಿಂದ ಕಲಿಕೆಯ ವಿಧಾನಗಳಲ್ಲಿ ಬಹಳಷ್ಟು ಸುಧಾರಣೆಗಳಿವೆ. ಪ್ರಾಧ್ಯಾಪಕರು ಚಟುವಟಿಕೆ ಆಧಾರಿತ ಕಲಿಕಾ ವಿಧಾನಗಳನ್ನು ಅಳವಡಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ವಿಷಯಗಳು ಸುಲಭವಾಗಿ ಮನದಟ್ಟಾಗುತ್ತವೆ’ ಎಂದು ತಿಳಿಸಿದರು.</p>.<p>‘ಇಂದಿನ ವಿದ್ಯಾರ್ಥಿಗಳು ಮೊಬೈಲ್, ಇಂಟರ್ನೆಟ್ ಮೊದಲಾದ ವಿಷಯಗಳಲ್ಲಿ ಹೆಚ್ಚು ಆಸಕ್ತಿ ತೋರುತ್ತಿರುವುದರಿಂದ ಕಲಿಕೆಯಲ್ಲಿ ನಿರಾಸಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ. ಅವರು ಕಲಿಕೆಯಲ್ಲಿ ಆಸಕ್ತಿ ವಹಿಸಲು ಪ್ರಾಧ್ಯಾಪಕರು ಚಟುವಟಿಕೆ ಆಧಾರಿತ ಬೋಧನಾ ಕ್ರಮ ಅಳವಡಿಸಿಕೊಳ್ಳುವುದು ಇಂದಿನ ಅವಶ್ಯವಾಗಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಬಸವರಾಜ ಕಟಗೇರಿ, ‘ಚಟುವಟಿಕೆ ಆಧಾರಿತ ಕಲಿಕೆಯು ಜಗತ್ತಿನಲ್ಲಿಯೇ ಅತ್ಯುತ್ತಮ ಕಲಿಕಾ ವಿಧಾನವಾಗಿದೆ ಹಾಗೂ ವಿದ್ಯಾರ್ಥಿ ಕೇಂದ್ರೀಕೃತವಾಗಿದೆ. ವಿದ್ಯಾರ್ಥಿಗಳು ಇದನ್ನು ಅಳವಡಿಸಿಕೊಂಡು ಕಲಿಕಾ ಸಾಮರ್ಥ್ಯ ವೃದ್ಧಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಡಾ.ರಾಜಕುಮಾರ ರಾಯ್ಕರ ಸ್ವಾಗತಿಸಿದರು. ಡಾ.ಉಮೇಶ ದೇಶನ್ನವರ ಪರಿಚಯಿಸಿದರು. ಡಾ.ಮಹೇಶ ಕಾಮೋಜಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>