ಆರ್ಸಿಯು ಸಹಾಯಕ ಪ್ರಾಧ್ಯಾಪಕಿ ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ ಮಾತನಾಡಿ, ‘ವಿಜ್ಞಾನ, ತಂತ್ರಜ್ಞಾನ ಬೆಳೆದಿದೆ. ಆದರೆ, ಸದ್ಬಳಕೆಯ ಕೊರತೆಯು ಪ್ರಾಕೃತಿಕ ತೊಂದರೆಗಳಿಗೆ ದಾರಿ ಮಾಡಿಕೊಡುತ್ತಿದೆ. ಯಾವುದನ್ನು ಕಾಯಬೇಕು, ಕೊಲ್ಲಬೇಕು ಎಂಬ ನಿರ್ಧಾರ ತೆಗೆದುಕೊಳ್ಳುವ ಹಕ್ಕು ನಿಸರ್ಗಕ್ಕಿದೆ. ವಚನಗಳಲ್ಲಿನ ಸಾರ ಅಳವಡಿಸಿಕೊಳ್ಳುವುದರಿಂದ ಪ್ರಾಕೃತಿಕ ವಿಕೋಪಗಳನ್ನು ತಡೆಯಬಹುದು’ ಎಂದರು.