<p><strong>ಬೆಳಗಾವಿ</strong>: ಇಲ್ಲಿನ ನೆಹರೂ ನಗರದಲ್ಲಿರುವ ಕೆಎಲ್ಇ ಫಾರ್ಮಸಿ ಕಾಲೇಜಿನಲ್ಲಿ ಫಾರ್ಮಸಿ ಪ್ರಾಕ್ಟೀಸ್ ವಿಭಾಗದಿಂದ ವಿದ್ಯಾರ್ಥಿಗಳಿಗೆ ಒಂದು ವಾರದವರೆಗೆ ಹಮ್ಮಿಕೊಂಡಿರುವ ಸುಧಾರಿತ ಶೈಕ್ಷಣಿಕ ತರಬೇತಿ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಲಾಯಿತು.</p>.<p>ಮುಖ್ಯಅತಿಥಿಯಾಗಿದ್ದ ಮೈಸೂರಿನ ಜೆಎಸ್ಎಸ್ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ ಕುಲಪತಿ ಮತ್ತು ಭಾರತೀಯ ಫಾರ್ಮಸಿ ಕೌನ್ಸಿಲ್ ಅಧ್ಯಕ್ಷ ಡಾ.ಬಿ. ಸುರೇಶ್ ಉದ್ಘಾಟಿಸಿದರು.</p>.<p>ನಂತರ ಮಾತನಾಡಿದ ಅವರು, ‘ದೇಶದಲ್ಲಿ ಫಾರ್ಮಸಿ ಶಿಕ್ಷಣ ಹಾಗೂ ವೃತ್ತಿ ಅತ್ಯಗತ್ಯವಾಗಿದ್ದು, ಮಹತ್ವದ ಸ್ಥಾನ ಪಡೆದಿದೆ. ವಿದ್ಯಾರ್ಥಿಗಳು ಕ್ಲಿನಿಕಲ್ ಕ್ಷೇತ್ರದಲ್ಲಿ ತೊಡಗಿಕೊಳ್ಳುವುದಕ್ಕೆ ಪೂರಕವಾಗಿ ಕಾಲೇಜುಗಳು ಸಂಬಂಧಿಸಿದ ಕೈಗಾರಿಕೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು. ಈ ಮೂಲಕ ಪದವೀಧರರ ಕೌಶಲ ವೃದ್ಧಿಗೆ ಆದ್ಯತೆ ಕೊಡಬೇಕು’ ಎಂದು ಸಲಹೆ ನೀಡಿದರು.</p>.<p>ಕೆಎಲ್ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ ಕುಲಪತಿ ಪ್ರೊ.ವಿವೇಕ ಸಾವೊಜಿ ಅಧ್ಯಕ್ಷತೆ ವಹಿಸಿದ್ದರು.</p>.<p>ಕಾಲೇಜಿನ ಪ್ರಾಚಾರ್ಯ ಪ್ರೊ.ಸುನೀಲ್ ಎಸ್.ಜಲಾಲಪುರೆ, ಡೀನ್ ಪ್ರೊ.ಎಂ.ಎಸ್. ಗಣಾಚಾರಿ, ಉಪ ಪ್ರಾಂಶುಪಾಲ ಡಾ.ಎಂ.ಬಿ. ಪಾಟೀಲ ಇದ್ದರು.</p>.<p>ಗೀತಾಂಜಲಿ ಸಾಲಿಮಠ ಸ್ವಾಗತಿಸಿದರು. ಐಶ್ವರ್ಯಾ ಹಿರೇಮಠ ನಿರೂಪಿಸಿದರು. ಅನುಶ್ರೀ ದೇಶಪಾಂಡೆ ವಂದಿಸಿದರು.</p>.<p>300 ವಿದ್ಯಾರ್ಥಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಇಲ್ಲಿನ ನೆಹರೂ ನಗರದಲ್ಲಿರುವ ಕೆಎಲ್ಇ ಫಾರ್ಮಸಿ ಕಾಲೇಜಿನಲ್ಲಿ ಫಾರ್ಮಸಿ ಪ್ರಾಕ್ಟೀಸ್ ವಿಭಾಗದಿಂದ ವಿದ್ಯಾರ್ಥಿಗಳಿಗೆ ಒಂದು ವಾರದವರೆಗೆ ಹಮ್ಮಿಕೊಂಡಿರುವ ಸುಧಾರಿತ ಶೈಕ್ಷಣಿಕ ತರಬೇತಿ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಲಾಯಿತು.</p>.<p>ಮುಖ್ಯಅತಿಥಿಯಾಗಿದ್ದ ಮೈಸೂರಿನ ಜೆಎಸ್ಎಸ್ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ ಕುಲಪತಿ ಮತ್ತು ಭಾರತೀಯ ಫಾರ್ಮಸಿ ಕೌನ್ಸಿಲ್ ಅಧ್ಯಕ್ಷ ಡಾ.ಬಿ. ಸುರೇಶ್ ಉದ್ಘಾಟಿಸಿದರು.</p>.<p>ನಂತರ ಮಾತನಾಡಿದ ಅವರು, ‘ದೇಶದಲ್ಲಿ ಫಾರ್ಮಸಿ ಶಿಕ್ಷಣ ಹಾಗೂ ವೃತ್ತಿ ಅತ್ಯಗತ್ಯವಾಗಿದ್ದು, ಮಹತ್ವದ ಸ್ಥಾನ ಪಡೆದಿದೆ. ವಿದ್ಯಾರ್ಥಿಗಳು ಕ್ಲಿನಿಕಲ್ ಕ್ಷೇತ್ರದಲ್ಲಿ ತೊಡಗಿಕೊಳ್ಳುವುದಕ್ಕೆ ಪೂರಕವಾಗಿ ಕಾಲೇಜುಗಳು ಸಂಬಂಧಿಸಿದ ಕೈಗಾರಿಕೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು. ಈ ಮೂಲಕ ಪದವೀಧರರ ಕೌಶಲ ವೃದ್ಧಿಗೆ ಆದ್ಯತೆ ಕೊಡಬೇಕು’ ಎಂದು ಸಲಹೆ ನೀಡಿದರು.</p>.<p>ಕೆಎಲ್ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ ಕುಲಪತಿ ಪ್ರೊ.ವಿವೇಕ ಸಾವೊಜಿ ಅಧ್ಯಕ್ಷತೆ ವಹಿಸಿದ್ದರು.</p>.<p>ಕಾಲೇಜಿನ ಪ್ರಾಚಾರ್ಯ ಪ್ರೊ.ಸುನೀಲ್ ಎಸ್.ಜಲಾಲಪುರೆ, ಡೀನ್ ಪ್ರೊ.ಎಂ.ಎಸ್. ಗಣಾಚಾರಿ, ಉಪ ಪ್ರಾಂಶುಪಾಲ ಡಾ.ಎಂ.ಬಿ. ಪಾಟೀಲ ಇದ್ದರು.</p>.<p>ಗೀತಾಂಜಲಿ ಸಾಲಿಮಠ ಸ್ವಾಗತಿಸಿದರು. ಐಶ್ವರ್ಯಾ ಹಿರೇಮಠ ನಿರೂಪಿಸಿದರು. ಅನುಶ್ರೀ ದೇಶಪಾಂಡೆ ವಂದಿಸಿದರು.</p>.<p>300 ವಿದ್ಯಾರ್ಥಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>