ಕೇಂದ್ರದ ವಿರುದ್ಧ ಆಕ್ರೋಶ:ಸಂಘದ ಉಪಾಧ್ಯಕ್ಷೆಯಲ್ಲಾಬಾಯಿ ಶೀಗಿಹಳ್ಳಿ ಮಾತನಾಡಿ, ‘ ಕೇಂದ್ರ ಸರ್ಕಾರದ ಅನೇಕ ಯೋಜನೆಗಳ ಅನುಷ್ಟಾನದಲ್ಲಿ ಅಂಗನವಾಡಿ ನೌಕರರ ಪಾತ್ರ ಪ್ರಮುಖವಾಗಿದೆ. ಕೇಂದ್ರ ಸರ್ಕಾರ ಬಜೆಟ್ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳ ಮಾಡಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಸರ್ಕಾರ ನಿರೀಕ್ಷೆಯನ್ನು ಹುಸಿಯಾಗಿಸಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.