<p><strong>ಮೂಡಲಗಿ</strong>: ‘ಮದ್ಯ ಸೇವನೆಯಂತ ದುಶ್ಚಟಗಳಿಂದ ಮುಕ್ತವಾಗಿದ್ದರೆ ಕುಟುಂಬವು ಶಾಂತಿ, ನೆಮ್ಮದಿಯೊಂದಿಗೆ ಜೀವನ ಸುಂದರವಾಗಿರುತ್ತದೆ’ ಎಂದು ನಾಗನೂರದ ಜಗದ್ಗುರು ರೇಣುಕಾಚಾರ್ಯ ಶಿವಲಿಂಗ ಆಶ್ರಮದ ಕಾವ್ಯಶ್ರೀ ಅಮ್ಮನವರು ಹೇಳಿದರು.</p>.<p>ತಾಲ್ಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ಕಲ್ಯಾಣ ಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭವೃದ್ಧಿ ಸಂಸ್ಥೆಯವರಿಂದ ಆಯೋಜಿಸಿರುವ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಮನುಷ್ಯ ತನ್ನ ಬದುಕಿನುದ್ದಕ್ಕೂ ಸರಳತೆ ಮತ್ತು ಸುಸಂಸ್ಕೃತವಾಗಿ ಬಾಳುವ ಮೂಲಕ ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು’ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ ಭುಜನ್ನವರ ಶಿಬಿರವನ್ನು ಉದ್ಘಾಟಿಸಿ, ‘ಮದ್ಯ ಸೇವನೆಗಾಗಿ ಖರ್ಚು ಮಾಡುವ ಹಣವನ್ನು ಮಕ್ಕಳ ಶಿಕ್ಷಣಕ್ಕೆ ಬಳಸಿರಿ, ಮಕ್ಕಳ ಉತ್ತಮ ಭವಿಷ್ಯವನ್ನು ನಿರ್ಮಿಸಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಶಿಬಿರದ ಯೋಜನಾಧಿಕಾರಿ ಭಾಸ್ಕರ್ ಎನ್. ಪ್ರಾಸ್ತಾವಿಕವಾಗಿ ಮಾತನಾಡಿ, ‘ಇದು 1941ನೇ ಶಿಬಿರವಾಗಿದ್ದು, ಧರ್ಮಸ್ಥಳ ಸಂಸ್ಥೆಯಿಂದ ರಾಜ್ಯದ ವಿವಿಧೆಡೆಯಲ್ಲಿ ಮದ್ಯವರ್ಜನ ಶಿಬಿರಗಳು ಯಶಸ್ಸಾಗಿವೆ’ ಎಂದರು.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕಿ ನಾಗರತ್ನಾ ಹೆಗಡೆ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯೆ ಶಿವಲೀಲಾ ಗಾಣಿಗೇರ, ಸುರ್ವಣಾ ಪೂರ್ವಿಮಠ, ಸಂಜು ಹೊಸಕೋಟಿ, ಭರಮಪ್ಪ ಗಂಗಣ್ಣವರ, ಭರಮಣ್ಣ ಆಶಿರೊಟ್ಟಿ, ಶ್ರೀಕಾಂತ ಆಶಿರೊಟ್ಟಿ, ಕಲ್ಲೋಳೆಪ್ಪ ಆಶಿರೊಟ್ಟಿ ಇದ್ದರು.</p>.<p>100ಕ್ಕೂ ಅಧಿಕ ಜನರು ಶಿಬಿರದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಲಗಿ</strong>: ‘ಮದ್ಯ ಸೇವನೆಯಂತ ದುಶ್ಚಟಗಳಿಂದ ಮುಕ್ತವಾಗಿದ್ದರೆ ಕುಟುಂಬವು ಶಾಂತಿ, ನೆಮ್ಮದಿಯೊಂದಿಗೆ ಜೀವನ ಸುಂದರವಾಗಿರುತ್ತದೆ’ ಎಂದು ನಾಗನೂರದ ಜಗದ್ಗುರು ರೇಣುಕಾಚಾರ್ಯ ಶಿವಲಿಂಗ ಆಶ್ರಮದ ಕಾವ್ಯಶ್ರೀ ಅಮ್ಮನವರು ಹೇಳಿದರು.</p>.<p>ತಾಲ್ಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ಕಲ್ಯಾಣ ಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭವೃದ್ಧಿ ಸಂಸ್ಥೆಯವರಿಂದ ಆಯೋಜಿಸಿರುವ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಮನುಷ್ಯ ತನ್ನ ಬದುಕಿನುದ್ದಕ್ಕೂ ಸರಳತೆ ಮತ್ತು ಸುಸಂಸ್ಕೃತವಾಗಿ ಬಾಳುವ ಮೂಲಕ ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು’ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ ಭುಜನ್ನವರ ಶಿಬಿರವನ್ನು ಉದ್ಘಾಟಿಸಿ, ‘ಮದ್ಯ ಸೇವನೆಗಾಗಿ ಖರ್ಚು ಮಾಡುವ ಹಣವನ್ನು ಮಕ್ಕಳ ಶಿಕ್ಷಣಕ್ಕೆ ಬಳಸಿರಿ, ಮಕ್ಕಳ ಉತ್ತಮ ಭವಿಷ್ಯವನ್ನು ನಿರ್ಮಿಸಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಶಿಬಿರದ ಯೋಜನಾಧಿಕಾರಿ ಭಾಸ್ಕರ್ ಎನ್. ಪ್ರಾಸ್ತಾವಿಕವಾಗಿ ಮಾತನಾಡಿ, ‘ಇದು 1941ನೇ ಶಿಬಿರವಾಗಿದ್ದು, ಧರ್ಮಸ್ಥಳ ಸಂಸ್ಥೆಯಿಂದ ರಾಜ್ಯದ ವಿವಿಧೆಡೆಯಲ್ಲಿ ಮದ್ಯವರ್ಜನ ಶಿಬಿರಗಳು ಯಶಸ್ಸಾಗಿವೆ’ ಎಂದರು.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕಿ ನಾಗರತ್ನಾ ಹೆಗಡೆ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯೆ ಶಿವಲೀಲಾ ಗಾಣಿಗೇರ, ಸುರ್ವಣಾ ಪೂರ್ವಿಮಠ, ಸಂಜು ಹೊಸಕೋಟಿ, ಭರಮಪ್ಪ ಗಂಗಣ್ಣವರ, ಭರಮಣ್ಣ ಆಶಿರೊಟ್ಟಿ, ಶ್ರೀಕಾಂತ ಆಶಿರೊಟ್ಟಿ, ಕಲ್ಲೋಳೆಪ್ಪ ಆಶಿರೊಟ್ಟಿ ಇದ್ದರು.</p>.<p>100ಕ್ಕೂ ಅಧಿಕ ಜನರು ಶಿಬಿರದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>