<p><strong>ಬೆಳಗಾವಿ</strong>: ಹುಕ್ಕೇರಿ ಪುರಸಭೆ ಚುನಾವಣೆಯಲ್ಲಿ ಬಿಜೆಪಿ–ಕಾಂಗ್ರೆಸ್ ಅಭ್ಯರ್ಥಿಗಳು ಎಲ್ಲ 23 ವಾರ್ಡ್ಗಳಲ್ಲೂ ಸ್ಪರ್ಧಿಸಿದ್ದಾರೆ. ಆದರೆ, ವಾಸ್ತವವಾಗಿ ಶಾಸಕ, ಬಿಜೆಪಿಯ ಉಮೇಶ ಕತ್ತಿ ಹಾಗೂ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಎ.ಬಿ. ಪಾಟೀಲ ನಡುವೆಯೇ ಹಣಾಹಣಿ ನಡೆಯುತ್ತಿರುವುದು ಕಂಡುಬಂದಿದೆ.</p>.<p>ತಮ್ಮ ಹಿಡಿತ ಮತ್ತಷ್ಟು ಗಟ್ಟಿಗೊಳಿಸಿಕೊಳ್ಳಲು ಕತ್ತಿ ತಂತ್ರ ರೂಪಿಸಿದ್ದರೆ, ವಿಧಾನಸಭೆ ಚುನಾವಣೆಯಲ್ಲಿ ಉಂಟಾದ ಸೋಲಿನ ಸೇಡು ತೀರಿಸಿಕೊಳ್ಳಲು ಎ.ಬಿ. ಪಾಟೀಲ ಪ್ರತಿತಂತ್ರ ಎಣೆದಿದ್ದಾರೆ. ಈ ಚುನಾವಣೆಯನ್ನು ಉಭಯ ನಾಯಕರೂ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ. ವೈಯಕ್ತಿಕ ವರ್ಚಸ್ಸಿನ ಮೇಲೆ ಪುರಸಭೆಯನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಯೋಜಿಸಿದ್ದಾರೆ. ಇದರಿಂದಾಗಿ, ಈ ಸ್ಥಳೀಯ ಸಂಸ್ಥೆಯ ಚುನಾವಣಾ ಕಣ ರಂಗೇರಿದೆ.</p>.<p>ಪಟ್ಟಣ ಪಂಚಾಯ್ತಿಯಾಗಿದ್ದ ಈ ನಗರ ಸ್ಥಳೀಯ ಸಂಸ್ಥೆಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಇದಾದ ನಂತರ ನಡೆಯುತ್ತಿರುವ ಮೊದಲ ಚುನಾವಣೆ ಇದು. ಪಟ್ಟಣ ಪಂಚಾಯ್ತಿ ಇದ್ದಾಗ 19 ವಾರ್ಡ್ಗಳಿದ್ದವು. ಈಗ, ಜನಸಂಖ್ಯೆ ಆಧರಿಸಿ 23 ವಾರ್ಡ್ಗಳನ್ನು ರಚಿಸಲಾಗಿದೆ. 11 ವಾರ್ಡ್ಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕೂಡ ಕಣದಲ್ಲಿದ್ದಾರೆ. ಆ ಪಕ್ಷದ ಇಲ್ಲಿ ಅಷ್ಟಾಗಿ ಪ್ರಕಾಶಿಸುತ್ತಿಲ್ಲ. ಇದರಿಂದಾಗಿ ಮೇಲ್ನೋಟಕ್ಕೆ ಬಿಜೆಪಿ–ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ಇದೆ.</p>.<p class="Briefhead"><strong>ಕಾಂಗ್ರೆಸ್ ಪ್ರಯತ್ನ:</strong>ಪಟ್ಟಣ ಪಂಚಾಯ್ತಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಆಗ, ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಆ ಪಕ್ಷದ ಅಭ್ಯರ್ಥಿಗಳು ಮತ ಕೇಳುತ್ತಿದ್ದಾರೆ. ಕಾಂಗ್ರೆಸ್ನವರು, ಲೋಪದೋಷಗಳ ಮೇಲೆ ಬೆಳಕು ಚೆಲ್ಲುತ್ತಾ ಸುಧಾರಣೆಗಾಗಿ ತಮ್ಮನ್ನು ಬೆಂಬಲಿಸುವಂತೆ ಕೋರುತ್ತಿದ್ದಾರೆ.</p>.<p>ಈಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಉಮೇಶ ಕತ್ತಿ ಗೆಲುವಿನ ಓಟ ಮುಂದುವರಿಸಿದ್ದಾರಾದರೂ, ಹುಕ್ಕೇರಿ ಪಟ್ಟಣ ವ್ಯಾಪ್ತಿಯಲ್ಲಿ ಅವರಿಗೆ ಅಂದಾಜು 3,500 ಮತಗಳು (ಹಿಂದಿನ ಚುನಾವಣೆಗೆ ಹೋಲಿಸಿದರೆ) ಕಡಿಮೆಯಾಗಿವೆ. ಹೀಗಾಗಿ, ಜನರ ಮನಸ್ಸು ತಮ್ಮ ಕಡೆಗಿದೆ, ಈ ಚುನಾವಣೆಯಲ್ಲಿ ಅದರ ಲಾಭ ಪಡೆದುಕೊಳ್ಳಬೇಕು ಎನ್ನುವುದು ಕಾಂಗ್ರೆಸ್ನವರ ಲೆಕ್ಕಾಚಾರ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಇಲ್ಲಿಗೆ ಬಂದು ಪ್ರಚಾರ ಮಾಡಿ ಹೋಗಿದ್ದಾರೆ. ಬಿಜೆಪಿಯಲ್ಲಿ ಸ್ಥಳೀಯ ನಾಯಕರು ಮಾತ್ರವೇ ಪ್ರಚಾರಕ್ಕಿಳಿದಿದ್ದಾರೆ.</p>.<p>ಪಿಕೆಪಿಎಸ್, ಸಕ್ಕರೆ ಕಾರ್ಖಾನೆ, ವಿದ್ಯುತ್ ಸಹಕಾರ ಸೊಸೈಟಿಗಳ ಮೇಲೆ ಉಮೇಶ ಕತ್ತಿ, ಸಹೋದರ ರಮೇಶ ಕತ್ತಿ ಹಿಡಿತವಿದೆ. ಇದು, ಪಕ್ಷಕ್ಕೆ ಲಾಭವಾಗಬಹುದು ಎನ್ನುವ ನಿರೀಕ್ಷೆ ಬಿಜೆಪಿಯವರದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಹುಕ್ಕೇರಿ ಪುರಸಭೆ ಚುನಾವಣೆಯಲ್ಲಿ ಬಿಜೆಪಿ–ಕಾಂಗ್ರೆಸ್ ಅಭ್ಯರ್ಥಿಗಳು ಎಲ್ಲ 23 ವಾರ್ಡ್ಗಳಲ್ಲೂ ಸ್ಪರ್ಧಿಸಿದ್ದಾರೆ. ಆದರೆ, ವಾಸ್ತವವಾಗಿ ಶಾಸಕ, ಬಿಜೆಪಿಯ ಉಮೇಶ ಕತ್ತಿ ಹಾಗೂ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಎ.ಬಿ. ಪಾಟೀಲ ನಡುವೆಯೇ ಹಣಾಹಣಿ ನಡೆಯುತ್ತಿರುವುದು ಕಂಡುಬಂದಿದೆ.</p>.<p>ತಮ್ಮ ಹಿಡಿತ ಮತ್ತಷ್ಟು ಗಟ್ಟಿಗೊಳಿಸಿಕೊಳ್ಳಲು ಕತ್ತಿ ತಂತ್ರ ರೂಪಿಸಿದ್ದರೆ, ವಿಧಾನಸಭೆ ಚುನಾವಣೆಯಲ್ಲಿ ಉಂಟಾದ ಸೋಲಿನ ಸೇಡು ತೀರಿಸಿಕೊಳ್ಳಲು ಎ.ಬಿ. ಪಾಟೀಲ ಪ್ರತಿತಂತ್ರ ಎಣೆದಿದ್ದಾರೆ. ಈ ಚುನಾವಣೆಯನ್ನು ಉಭಯ ನಾಯಕರೂ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ. ವೈಯಕ್ತಿಕ ವರ್ಚಸ್ಸಿನ ಮೇಲೆ ಪುರಸಭೆಯನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಯೋಜಿಸಿದ್ದಾರೆ. ಇದರಿಂದಾಗಿ, ಈ ಸ್ಥಳೀಯ ಸಂಸ್ಥೆಯ ಚುನಾವಣಾ ಕಣ ರಂಗೇರಿದೆ.</p>.<p>ಪಟ್ಟಣ ಪಂಚಾಯ್ತಿಯಾಗಿದ್ದ ಈ ನಗರ ಸ್ಥಳೀಯ ಸಂಸ್ಥೆಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಇದಾದ ನಂತರ ನಡೆಯುತ್ತಿರುವ ಮೊದಲ ಚುನಾವಣೆ ಇದು. ಪಟ್ಟಣ ಪಂಚಾಯ್ತಿ ಇದ್ದಾಗ 19 ವಾರ್ಡ್ಗಳಿದ್ದವು. ಈಗ, ಜನಸಂಖ್ಯೆ ಆಧರಿಸಿ 23 ವಾರ್ಡ್ಗಳನ್ನು ರಚಿಸಲಾಗಿದೆ. 11 ವಾರ್ಡ್ಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕೂಡ ಕಣದಲ್ಲಿದ್ದಾರೆ. ಆ ಪಕ್ಷದ ಇಲ್ಲಿ ಅಷ್ಟಾಗಿ ಪ್ರಕಾಶಿಸುತ್ತಿಲ್ಲ. ಇದರಿಂದಾಗಿ ಮೇಲ್ನೋಟಕ್ಕೆ ಬಿಜೆಪಿ–ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ಇದೆ.</p>.<p class="Briefhead"><strong>ಕಾಂಗ್ರೆಸ್ ಪ್ರಯತ್ನ:</strong>ಪಟ್ಟಣ ಪಂಚಾಯ್ತಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಆಗ, ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಆ ಪಕ್ಷದ ಅಭ್ಯರ್ಥಿಗಳು ಮತ ಕೇಳುತ್ತಿದ್ದಾರೆ. ಕಾಂಗ್ರೆಸ್ನವರು, ಲೋಪದೋಷಗಳ ಮೇಲೆ ಬೆಳಕು ಚೆಲ್ಲುತ್ತಾ ಸುಧಾರಣೆಗಾಗಿ ತಮ್ಮನ್ನು ಬೆಂಬಲಿಸುವಂತೆ ಕೋರುತ್ತಿದ್ದಾರೆ.</p>.<p>ಈಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಉಮೇಶ ಕತ್ತಿ ಗೆಲುವಿನ ಓಟ ಮುಂದುವರಿಸಿದ್ದಾರಾದರೂ, ಹುಕ್ಕೇರಿ ಪಟ್ಟಣ ವ್ಯಾಪ್ತಿಯಲ್ಲಿ ಅವರಿಗೆ ಅಂದಾಜು 3,500 ಮತಗಳು (ಹಿಂದಿನ ಚುನಾವಣೆಗೆ ಹೋಲಿಸಿದರೆ) ಕಡಿಮೆಯಾಗಿವೆ. ಹೀಗಾಗಿ, ಜನರ ಮನಸ್ಸು ತಮ್ಮ ಕಡೆಗಿದೆ, ಈ ಚುನಾವಣೆಯಲ್ಲಿ ಅದರ ಲಾಭ ಪಡೆದುಕೊಳ್ಳಬೇಕು ಎನ್ನುವುದು ಕಾಂಗ್ರೆಸ್ನವರ ಲೆಕ್ಕಾಚಾರ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಇಲ್ಲಿಗೆ ಬಂದು ಪ್ರಚಾರ ಮಾಡಿ ಹೋಗಿದ್ದಾರೆ. ಬಿಜೆಪಿಯಲ್ಲಿ ಸ್ಥಳೀಯ ನಾಯಕರು ಮಾತ್ರವೇ ಪ್ರಚಾರಕ್ಕಿಳಿದಿದ್ದಾರೆ.</p>.<p>ಪಿಕೆಪಿಎಸ್, ಸಕ್ಕರೆ ಕಾರ್ಖಾನೆ, ವಿದ್ಯುತ್ ಸಹಕಾರ ಸೊಸೈಟಿಗಳ ಮೇಲೆ ಉಮೇಶ ಕತ್ತಿ, ಸಹೋದರ ರಮೇಶ ಕತ್ತಿ ಹಿಡಿತವಿದೆ. ಇದು, ಪಕ್ಷಕ್ಕೆ ಲಾಭವಾಗಬಹುದು ಎನ್ನುವ ನಿರೀಕ್ಷೆ ಬಿಜೆಪಿಯವರದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>