<p><strong>ಐಗಳಿ:</strong> ಪಂಜಾಬ್ನಲ್ಲಿ ಹೃದಯಾಘಾತದಿಂದ ಮಂಗಳವಾರ ಮೃತಪಟ್ಟಿದ್ದ ಅಗ್ನಿವೀರ ಯೋಧ ಕಿರಣರಾಜ್ ಕೇದಾರಿ ತೆಲಸಂಗ ಅವರ ಅಂತ್ಯಕ್ರಿಯೆ ಗ್ರಾಮದಲ್ಲಿ ಗುರುವಾರ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು.</p>.<p>15 ತಿಂಗಳ ಹಿಂದೆ ಸೇನೆಗೆ ಸೇರಿದ್ದ ಕಿರಣರಾಜ್(23), ಕರ್ತವ್ಯದಲ್ಲಿ ಇದ್ದಾಗಲೇ ನಿಧನರಾಗಿದ್ದರು. ಈ ವಿಷಯ ಕೇಳಿ ಐಗಳಿಯಲ್ಲಿ ನೀರವ ಮೌನ ಆವರಿಸಿತ್ತು.</p>.<p>ಗುರುವಾರ ಮಧ್ಯಾಹ್ನ ಗ್ರಾಮಕ್ಕೆ ಪಾರ್ಥಿವ ಶರೀರ ಬರುತ್ತಿದ್ದಂತೆ, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ವರ್ತಕರು ಅಂಗಡಿಗಳನ್ನು ಮುಚ್ಚಿ ಗೌರವ ಸೂಚಿಸಿದರು. ಆದರ್ಶ ಶಿಕ್ಷಣ ಸಂಸ್ಥೆಯಲ್ಲಿ ಯೋಧನ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿತ್ತು. </p>.<p>‘ಇನ್ನೇನು ಮಗ ಸೇನೆಗೆ ಸೇರಿದ್ದಾನೆ. ಬಡತನ ನೀಗಲಿದೆ. ಮುಂದಿನ ವರ್ಷ ಆತನ ಮದುವೆ ಮಾಡೋಣ ಎಂದು ಯೋಜಿಸಿದ್ದೆವು. ಈಗ ನಮ್ಮ ಕನಸು ನುಚ್ಚುನೂರಾಗಿದೆ’ ಎಂದು ಎಂದು ಹೆತ್ತವರು ಕಣ್ಣೀರು ಹರಿಸಿದರು.</p>.<p>ಗ್ರಾ.ಪಂ ಅಧ್ಯಕ್ಷೆ ಶಕುಂತಲಾ ಪಾಟೀಲ, ಮಾಜಿ ಶಾಸಕರಾದ ಶಹಜಹಾನ್ ಡೊಂಗರಗಾಂವ, ಮಹೇಶ ಕುಮಠಳ್ಳಿ, ಎಸ್.ಐ.ಡೊಂಗರಗಾಂವ, ಗಜಾನನ ಮಂಗಸೂಳಿ, ಗಿರೀಶ ಬುಟಾಳೆ, ಸಿ.ಎಸ್.ನೇಮಗೌಡ, ಕಲ್ಮೇಶ ಆಸಂಗಿ ಮತ್ತಿತರರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಐಗಳಿ:</strong> ಪಂಜಾಬ್ನಲ್ಲಿ ಹೃದಯಾಘಾತದಿಂದ ಮಂಗಳವಾರ ಮೃತಪಟ್ಟಿದ್ದ ಅಗ್ನಿವೀರ ಯೋಧ ಕಿರಣರಾಜ್ ಕೇದಾರಿ ತೆಲಸಂಗ ಅವರ ಅಂತ್ಯಕ್ರಿಯೆ ಗ್ರಾಮದಲ್ಲಿ ಗುರುವಾರ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು.</p>.<p>15 ತಿಂಗಳ ಹಿಂದೆ ಸೇನೆಗೆ ಸೇರಿದ್ದ ಕಿರಣರಾಜ್(23), ಕರ್ತವ್ಯದಲ್ಲಿ ಇದ್ದಾಗಲೇ ನಿಧನರಾಗಿದ್ದರು. ಈ ವಿಷಯ ಕೇಳಿ ಐಗಳಿಯಲ್ಲಿ ನೀರವ ಮೌನ ಆವರಿಸಿತ್ತು.</p>.<p>ಗುರುವಾರ ಮಧ್ಯಾಹ್ನ ಗ್ರಾಮಕ್ಕೆ ಪಾರ್ಥಿವ ಶರೀರ ಬರುತ್ತಿದ್ದಂತೆ, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ವರ್ತಕರು ಅಂಗಡಿಗಳನ್ನು ಮುಚ್ಚಿ ಗೌರವ ಸೂಚಿಸಿದರು. ಆದರ್ಶ ಶಿಕ್ಷಣ ಸಂಸ್ಥೆಯಲ್ಲಿ ಯೋಧನ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿತ್ತು. </p>.<p>‘ಇನ್ನೇನು ಮಗ ಸೇನೆಗೆ ಸೇರಿದ್ದಾನೆ. ಬಡತನ ನೀಗಲಿದೆ. ಮುಂದಿನ ವರ್ಷ ಆತನ ಮದುವೆ ಮಾಡೋಣ ಎಂದು ಯೋಜಿಸಿದ್ದೆವು. ಈಗ ನಮ್ಮ ಕನಸು ನುಚ್ಚುನೂರಾಗಿದೆ’ ಎಂದು ಎಂದು ಹೆತ್ತವರು ಕಣ್ಣೀರು ಹರಿಸಿದರು.</p>.<p>ಗ್ರಾ.ಪಂ ಅಧ್ಯಕ್ಷೆ ಶಕುಂತಲಾ ಪಾಟೀಲ, ಮಾಜಿ ಶಾಸಕರಾದ ಶಹಜಹಾನ್ ಡೊಂಗರಗಾಂವ, ಮಹೇಶ ಕುಮಠಳ್ಳಿ, ಎಸ್.ಐ.ಡೊಂಗರಗಾಂವ, ಗಜಾನನ ಮಂಗಸೂಳಿ, ಗಿರೀಶ ಬುಟಾಳೆ, ಸಿ.ಎಸ್.ನೇಮಗೌಡ, ಕಲ್ಮೇಶ ಆಸಂಗಿ ಮತ್ತಿತರರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>