<p><strong>ಬೆಳಗಾವಿ</strong>: ಇಷ್ಟು ದಿನ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಅಹಿಂದ ನಾಯಕರ ‘ಡಿನ್ನರ್ ಪಾರ್ಟಿ’ ಬುಧವಾರ ಬೆಳಗಾವಿಯಲ್ಲೂ ಮುಂದುವರಿಯಿತು. ಮುಖ್ಯಮಂತ್ರಿ ಕುರ್ಚಿ ಕದನ ನಡೆದಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರೆಲ್ಲರೂ ರಾತ್ರಿ ಊಟಕ್ಕೆ ಒಂದೆಡೆ ಸೇರಿದ್ದು, ಮತ್ತೊಂದು ಚರ್ಚೆಗೆ ಪುಷ್ಠಿ ನೀಡಿತು.</p>.<p>ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಫಿರೋಜ್ ಸೇಠ್ ಹಾಗೂ ಶಾಸಕ ಆಸಿಫ್ ಸೇಠ್ ಅವರ ಮನೆಯಲ್ಲಿ ಬುಧವಾರ ರಾತ್ರಿ ಭೋಜನ ವ್ಯವಸ್ಥೆ ಮಾಡಲಾಗಿತ್ತು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಸತೀಶ ಜಾರಕಿಹೊಳಿ, ಎಚ್.ಸಿ.ಮಹಾದೇವಪ್ಪ, ಜಮೀರ್ ಅಹಮದ್ ಖಾನ್, ಭೈರತಿ ಸುರೇಶ್, ಎಂ.ಸಿ.ಸುಧಾಕರ, ರಹೀಂ ಖಾನ್, ಕೆ.ಜೆ.ಜಾರ್ಜ್, ಶಾಸಕರಾದ ಖನೀಜ್ ಫಾತಿಮಾ, ಸಲೀಂ ಅಹಮದ್, ಹ್ಯಾರಿಸ್ ಹಾಗೂ ಕೆಲವು ಶಾಸಕರೂ ಈ ಊಟೋಪಚಾರದಲ್ಲಿ ಭಾಗಿಯಾದರು.</p>.<p>‘ಐದು ವರ್ಷ ನಮ್ಮ ತಂದೆಯೇ ಮುಖ್ಯಮಂತ್ರಿ’ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲೇ, ಡಿ.ಕೆ.ಶಿವಕುಮಾರ್ ಬಳಗದ ಕೆಲವರು ಸಚಿವರು, ಶಾಸಕರು ತಿರುಗೇಟು ನೀಡಿದ್ದರು. ಈ ಚರ್ಚೆ ಬಿಸಿಯಾಗಿರುವಾಗಲೇ ಅಹಿಂದ ನಾಯಕರು ಗುಂಪುಗೂಡಿದ್ದಾರೆ.</p>.<p>‘ಈ ರೀತಿ ಪ್ರತಿವರ್ಷವೂ ಎಲ್ಲರನ್ನೂ ಊಟಕ್ಕೆ ಕರೆಯುತ್ತೇವೆ. ಇದರಲ್ಲಿ ಯಾವುದೇ ಉದ್ದೇಶ ಇಲ್ಲ’ ಎಂದು ಫಿರೋಜ್ ಸೇಠ್ ಪ್ರತಿಕ್ರಿಯೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಇಷ್ಟು ದಿನ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಅಹಿಂದ ನಾಯಕರ ‘ಡಿನ್ನರ್ ಪಾರ್ಟಿ’ ಬುಧವಾರ ಬೆಳಗಾವಿಯಲ್ಲೂ ಮುಂದುವರಿಯಿತು. ಮುಖ್ಯಮಂತ್ರಿ ಕುರ್ಚಿ ಕದನ ನಡೆದಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರೆಲ್ಲರೂ ರಾತ್ರಿ ಊಟಕ್ಕೆ ಒಂದೆಡೆ ಸೇರಿದ್ದು, ಮತ್ತೊಂದು ಚರ್ಚೆಗೆ ಪುಷ್ಠಿ ನೀಡಿತು.</p>.<p>ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಫಿರೋಜ್ ಸೇಠ್ ಹಾಗೂ ಶಾಸಕ ಆಸಿಫ್ ಸೇಠ್ ಅವರ ಮನೆಯಲ್ಲಿ ಬುಧವಾರ ರಾತ್ರಿ ಭೋಜನ ವ್ಯವಸ್ಥೆ ಮಾಡಲಾಗಿತ್ತು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಸತೀಶ ಜಾರಕಿಹೊಳಿ, ಎಚ್.ಸಿ.ಮಹಾದೇವಪ್ಪ, ಜಮೀರ್ ಅಹಮದ್ ಖಾನ್, ಭೈರತಿ ಸುರೇಶ್, ಎಂ.ಸಿ.ಸುಧಾಕರ, ರಹೀಂ ಖಾನ್, ಕೆ.ಜೆ.ಜಾರ್ಜ್, ಶಾಸಕರಾದ ಖನೀಜ್ ಫಾತಿಮಾ, ಸಲೀಂ ಅಹಮದ್, ಹ್ಯಾರಿಸ್ ಹಾಗೂ ಕೆಲವು ಶಾಸಕರೂ ಈ ಊಟೋಪಚಾರದಲ್ಲಿ ಭಾಗಿಯಾದರು.</p>.<p>‘ಐದು ವರ್ಷ ನಮ್ಮ ತಂದೆಯೇ ಮುಖ್ಯಮಂತ್ರಿ’ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲೇ, ಡಿ.ಕೆ.ಶಿವಕುಮಾರ್ ಬಳಗದ ಕೆಲವರು ಸಚಿವರು, ಶಾಸಕರು ತಿರುಗೇಟು ನೀಡಿದ್ದರು. ಈ ಚರ್ಚೆ ಬಿಸಿಯಾಗಿರುವಾಗಲೇ ಅಹಿಂದ ನಾಯಕರು ಗುಂಪುಗೂಡಿದ್ದಾರೆ.</p>.<p>‘ಈ ರೀತಿ ಪ್ರತಿವರ್ಷವೂ ಎಲ್ಲರನ್ನೂ ಊಟಕ್ಕೆ ಕರೆಯುತ್ತೇವೆ. ಇದರಲ್ಲಿ ಯಾವುದೇ ಉದ್ದೇಶ ಇಲ್ಲ’ ಎಂದು ಫಿರೋಜ್ ಸೇಠ್ ಪ್ರತಿಕ್ರಿಯೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>