ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಈ ಎಲ್ಲ ಪರೀಕ್ಷೆಗಳನ್ನು ಮುಂದೂಡಬೇಕು. ಏಕರೂಪ, ತಾರತಮ್ಯವಿಲ್ಲದ ಮತ್ತು ಉತ್ತಮ ಗುಣಮಟ್ಟದ ಶಿಕ್ಷಣ ಖಾತ್ರಿಪಡಿಸುವ ವೈಜ್ಞಾನಿಕ ಮೌಲ್ಯಮಾಪನ ಪ್ರಕ್ರಿಯೆ ಸಿದ್ಧಪಡಿಸಬೇಕು. ಉದ್ಯೋಗ ಭದ್ರತೆ ಖಾತ್ರಿಪಡಿಸಬೇಕು. ಎಲ್ಲ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕು. ಪರೀಕ್ಷಾ ಶುಲ್ಕ ರದ್ದಗೊಳಿಸಬೇಕು. ಈಗಾಗಲೇ ಪಡೆದಿದ್ದಲ್ಲಿ ಹಿಂದಿರುಗಿಸಬೇಕು. ಈ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 17ರಂದು ‘ಅಖಿಲ ಕರ್ನಾಟಕ ಪ್ರತಿಭಟನಾ ದಿನ’ ನಡೆಸಲಾಗುವುದು’ ಎಂದು ತಿಳಿಸಿದ್ದಾರೆ.